ಬೆಳ್ತಂಗಡಿ: ಪಾಕ್‌ ಪರ ಘೋಷಣೆ ಖಂಡಿಸಿ ಜ.7ರಂದು ಉಜಿರೆ ಬಸ್‌ ನಿಲ್ದಾಣದ ಸಮೀಪ  ಬೃಹತ್‌ ಪ್ರತಿಭಟನೆ -Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಪಾಕ್‌ ಪರ ಘೋಷಣೆ ಖಂಡಿಸಿ ಜ.7ರಂದು ಉಜಿರೆ ಬಸ್‌ ನಿಲ್ದಾಣದ ಸಮೀಪ  ಬೃಹತ್‌ ಪ್ರತಿಭಟನೆ -Vishwanews24

ಬೆಳ್ತಂಗಡಿ: ಉಜಿರೆಯಲ್ಲಿ ಗ್ರಾ.ಪಂ. ಮತಎಣಿಕೆ ಸಂದರ್ಭ ಎಸ್‌ಡಿಪಿಐ ಕಾರ್ಯಕರ್ತರ ವಿಜಯೋತ್ಸವದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಜ.7 ರಂದು ಸಂಜೆ 3 ಗಂಟೆಗೆ ಉಜಿರೆ ಬಸ್‌ ನಿಲ್ದಾಣದ ಸಮೀಪ ಬೃಹತ್‌ ಪ್ರತಿಭಟನಾ ಸಭೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್‌ ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ್‌ ಧರ್ಮಸ್ಥಳ ಹೇಳಿದರು.

ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಘಟನೆ ವಿರುದ್ಧ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳ ಪೊಲೀಸರಿಗೆ ದೂರು ನೀಡಿದ್ದು, ಇದರ ತನಿಖೆ ಪ್ರಗತಿಯ ಹಂತದಲ್ಲಿದೆ ಎಂದು ತಿಳಿಸಿದರು.

ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಹಾಗೂ ಘಟನೆಯನ್ನು ಖಂಡಿಸಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ವಿಭಾಗದ ಪ್ರಧಾನ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಸಹಿತ ರಾಜ್ಯ ಮತ್ತು ವಿಭಾಗದ ಪ್ರಮುಖರು ಭಾಗವಹಿಸಲಿದ್ದಾರೆ. ಸುಮಾರು ಒಂದು ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆಯಿದ್ದು, ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ವಿಹಿಂಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಕುಮಾರ್‌ ಅಗರ್ತ, ಜಿಲ್ಲಾಸಹ ಕಾರ್ಯದರ್ಶಿ ನವೀನ್‌ ನೆರಿಯ, ಭಜರಂಗದಳ ತಾಲೂಕು ಸಂಯೋಜಕ ಸಂತೋಷ್‌ ಕುಮಾರ್‌ ಅತ್ತಾಜೆ, ವಿಹಿಂಪ ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್‌ ಬೆಳ್ತಂಗಡಿ ಉಪಸ್ಥಿತರಿದ್ದರು.

http://ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ -Vishwanews24