ಬೆಳ್ತಂಗಡಿ : ಉಜಿರೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ವಿಜಯೋತ್ಸವದ ವೇಳೆ ಪಾಕಿಸ್ತಾನದ ಪರವಾಗಿ ಘೋಷಣೆ ಕೇಳಿ ಬಂದ ಪ್ರಕರಣಕ್ಕೆ ಸಂಬಂಧಿಸಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ ಎಂದು ಹಿಂದೂ ಕಾರ್ಯಕರ್ತರೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ.
ಎಸ್ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಪ್ರಕರಣ ದಾಖಲಾದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂದರ್ಭ ಈ ಹಿಂದೂ ನಾಯಕನ ಪೋಟೋವೂ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈಗ ಈ ಯುವಕನು ತನ್ನ ಮಾನ ಹಾನಿ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಎಸ್ಡಿಪಿಐ ಕಾರ್ಯಕರ್ತರು, ”ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದವರು ಹಿಂದೂ ಕಾರ್ಯಕರ್ತರು. ಈಗ ಅವರು ಎಸ್ಡಿಪಿಐ ಕಾರ್ಯಕರ್ತರ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ನೀಡಿದ್ದಾರೆ.
ಉಜಿರೆ ಕಾಲೇಜಿನ ಎದುರುಗಡೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದಲ್ಲಿ ಘೋಷಣೆಗಳನ್ನು ಕೂಗುತ್ತಿರುವುದರ ನಡುವೆ ‘ಪಾಕಿಸ್ತಾನ್ ಮುರ್ದಾಬಾದ್’ ಎಂಬ ಘೋಷಣೆ ಕೂಗುತ್ತಿರುವುದರೊಂದಿಗೆ ಅದೇ ಗುಂಪಿನ ಮಧ್ಯೆ ವ್ಯಕ್ತಿಯೋರ್ವ ‘ಪಾಕಿಸ್ತಾನ್ ಝಿಂದಾಬಾದ್’ ಎಂದು ಘೋಷಣೆ ಕೂಗುತ್ತಿರುವುದು ವೈರಲ್ ವೀಡಿಯೋದಲ್ಲಿ ಕೇಳಿಸುತ್ತಿದೆ.
ಉಜಿರೆಯಲ್ಲಿ ದೇಶದ್ರೋಹದ ಘೋಷಣೆ ಕೂಗಿದ್ದು ಬಿಜೆಪಿ ಕಾರ್ಯಕರ್ತರು. ಇದರ ವೀಡಿಯೊ ಹರಿದಾಡುತ್ತಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಸ್ಡಿಪಿಐ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಸ್ತುತ ಎರಡೂ ದೂರುಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…