Featured

ಬೆಳ್ತಂಗಡಿ : ಪಾಕ್ ಪರ ಘೋಷಣೆ ಹೆಸರಲ್ಲಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ : ಬಿಜೆಪಿ  ಕಾರ್ಯಕರ್ತ, ಎಸ್‌ಡಿಪಿಐ ವಿರುದ್ದ ದೂರು ದಾಖಲು -Vishwanews24

ಬೆಳ್ತಂಗಡಿ : ಪಾಕ್ ಪರ ಘೋಷಣೆ ಹೆಸರಲ್ಲಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ : ಬಿಜೆಪಿ ಕಾರ್ಯಕರ್ತ, ಎಸ್‌ಡಿಪಿಐ ವಿರುದ್ದ ದೂರು ದಾಖಲು -Vishwanews24

ಬೆಳ್ತಂಗಡಿ : ಉಜಿರೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ವಿಜಯೋತ್ಸವದ ವೇಳೆ ಪಾಕಿಸ್ತಾನದ ಪರವಾಗಿ ಘೋಷಣೆ ಕೇಳಿ ಬಂದ ಪ್ರಕರಣಕ್ಕೆ ಸಂಬಂಧಿಸಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ ಎಂದು ಹಿಂದೂ ಕಾರ್ಯಕರ್ತರೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ.

ಎಸ್‌ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಪ್ರಕರಣ ದಾಖಲಾದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಸಂದರ್ಭ ಈ ಹಿಂದೂ ನಾಯಕನ ಪೋಟೋವೂ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈಗ ಈ ಯುವಕನು ತನ್ನ ಮಾನ ಹಾನಿ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ಎಸ್‌ಡಿಪಿಐ ಕಾರ್ಯಕರ್ತರು, ”ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದವರು ಹಿಂದೂ ಕಾರ್ಯಕರ್ತರು. ಈಗ ಅವರು ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರತಿ ದೂರು ನೀಡಿದ್ದಾರೆ.

ಉಜಿರೆ ಕಾಲೇಜಿನ ಎದುರುಗಡೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದಲ್ಲಿ ಘೋಷಣೆಗಳನ್ನು ಕೂಗುತ್ತಿರುವುದರ ನಡುವೆ ‘ಪಾಕಿಸ್ತಾನ್ ಮುರ್ದಾಬಾದ್’ ಎಂಬ ಘೋಷಣೆ ಕೂಗುತ್ತಿರುವುದರೊಂದಿಗೆ ಅದೇ ಗುಂಪಿನ ಮಧ್ಯೆ ವ್ಯಕ್ತಿಯೋರ್ವ ‘ಪಾಕಿಸ್ತಾನ್ ಝಿಂದಾಬಾದ್‌’ ಎಂದು ಘೋಷಣೆ ಕೂಗುತ್ತಿರುವುದು ವೈರಲ್ ವೀಡಿಯೋದಲ್ಲಿ ಕೇಳಿಸುತ್ತಿದೆ.

ಉಜಿರೆಯಲ್ಲಿ ದೇಶದ್ರೋಹದ ಘೋಷಣೆ ಕೂಗಿದ್ದು ಬಿಜೆಪಿ ಕಾರ್ಯಕರ್ತರು. ಇದರ ವೀಡಿಯೊ ಹರಿದಾಡುತ್ತಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಸ್ತುತ ಎರಡೂ ದೂರುಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago