Featured

ಬೆಳ್ತಂಗಡಿ : ಪಾಕ್ ಪರ ಘೋಷಣೆ ಹೆಸರಲ್ಲಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ : ಬಿಜೆಪಿ  ಕಾರ್ಯಕರ್ತ, ಎಸ್‌ಡಿಪಿಐ ವಿರುದ್ದ ದೂರು ದಾಖಲು -Vishwanews24

ಬೆಳ್ತಂಗಡಿ : ಪಾಕ್ ಪರ ಘೋಷಣೆ ಹೆಸರಲ್ಲಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ : ಬಿಜೆಪಿ ಕಾರ್ಯಕರ್ತ, ಎಸ್‌ಡಿಪಿಐ ವಿರುದ್ದ ದೂರು ದಾಖಲು -Vishwanews24

ಬೆಳ್ತಂಗಡಿ : ಉಜಿರೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ವಿಜಯೋತ್ಸವದ ವೇಳೆ ಪಾಕಿಸ್ತಾನದ ಪರವಾಗಿ ಘೋಷಣೆ ಕೇಳಿ ಬಂದ ಪ್ರಕರಣಕ್ಕೆ ಸಂಬಂಧಿಸಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ ಎಂದು ಹಿಂದೂ ಕಾರ್ಯಕರ್ತರೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ.

ಎಸ್‌ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಪ್ರಕರಣ ದಾಖಲಾದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಸಂದರ್ಭ ಈ ಹಿಂದೂ ನಾಯಕನ ಪೋಟೋವೂ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈಗ ಈ ಯುವಕನು ತನ್ನ ಮಾನ ಹಾನಿ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ಎಸ್‌ಡಿಪಿಐ ಕಾರ್ಯಕರ್ತರು, ”ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದವರು ಹಿಂದೂ ಕಾರ್ಯಕರ್ತರು. ಈಗ ಅವರು ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರತಿ ದೂರು ನೀಡಿದ್ದಾರೆ.

ಉಜಿರೆ ಕಾಲೇಜಿನ ಎದುರುಗಡೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದಲ್ಲಿ ಘೋಷಣೆಗಳನ್ನು ಕೂಗುತ್ತಿರುವುದರ ನಡುವೆ ‘ಪಾಕಿಸ್ತಾನ್ ಮುರ್ದಾಬಾದ್’ ಎಂಬ ಘೋಷಣೆ ಕೂಗುತ್ತಿರುವುದರೊಂದಿಗೆ ಅದೇ ಗುಂಪಿನ ಮಧ್ಯೆ ವ್ಯಕ್ತಿಯೋರ್ವ ‘ಪಾಕಿಸ್ತಾನ್ ಝಿಂದಾಬಾದ್‌’ ಎಂದು ಘೋಷಣೆ ಕೂಗುತ್ತಿರುವುದು ವೈರಲ್ ವೀಡಿಯೋದಲ್ಲಿ ಕೇಳಿಸುತ್ತಿದೆ.

ಉಜಿರೆಯಲ್ಲಿ ದೇಶದ್ರೋಹದ ಘೋಷಣೆ ಕೂಗಿದ್ದು ಬಿಜೆಪಿ ಕಾರ್ಯಕರ್ತರು. ಇದರ ವೀಡಿಯೊ ಹರಿದಾಡುತ್ತಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಸ್ತುತ ಎರಡೂ ದೂರುಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago