Featured

ಬೆಳ್ತಂಗಡಿ: ಪ್ಯಾರಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ – Vishwanews24

ಬೆಳ್ತಂಗಡಿ: ಪ್ಯಾರಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಸಾವನ್ನಪ್ಪಿದ್ದ ಯುವತಿ.

ದಾಸ್ ಎಂಬವರ ಮಗಳು ಆದೀರಾ, ಮಗ ನರೇಂದ್ರ ಮತ್ತು ಅಣ್ಣನ ಮಗ ರೋಹಿತ್ ಅವರು ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯಲ್ಲಿದ್ದು ಅದಿರಾ ಮೊದಲನೇ ವರ್ಷದ ಪ್ಯಾರಮೆಡಿಕಲ್ ವ್ಯಾಸಂಗ ಮಾಡುತ್ತಿದ್ದರು.

ಇನ್ನು ಜೂ 18 ರಂದು ಆದಿತ್ಯವಾರ ರಾತ್ರಿ ಮೂವರು ಒಟ್ಟಿಗೆ ಊಟ ಮಾಡಿ ಒಂದು ಕೋಣೆಯಲ್ಲಿ ಅದಿರಾ ಮಲಗಿದ್ದು ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ. ಆದರೆ ಜೂನ್ 19 ಸೋಮವಾರ ಬೆಳಗ್ಗೆ 8 ಗಂಟೆಗೆ ಎದ್ದು ನರೇಂದ್ರ ನೋಡುವಾಗ ಅದಿರಾ ತನ್ನ ಚೂಡಿದಾರ್ ಶಾಲಿನಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು ತಕ್ಷಣ ತಂದೆ ದಾಸ್ ಅವರಿಗೆ ಈ ಬಗ್ಗೆ ತಿಳಿಸಿದ್ದಾರೆ. ಅವರು ಬಂದು ಸ್ಥಳೀಯರ ಸಹಕಾರದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮಗಳನ್ನು ಕೊಂಡು ಹೋಗಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಪರೀಕ್ಷಿಸಿದ ವೈದ್ಯರು ಯುವತಿ ಮೃತ ಪಟ್ಟಿರುವುದಾಗಿ ಧೃಡಪಡಿಸಿದ್ದಾರೆ.

ಈ ಬಗ್ಗೆ ಯುವತಿಯ ತಂದೆ ದಾಸ್ ಅವರು ಯಾವುದೋ ಕಾರಣಕ್ಕಾಗಿ ಮಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಯುವತಿಯ ಮೊಬೈಲ್ ವಿವರಗಳನ್ನು ಪರಿಶೀಲನೆ ನಡೆಸುತಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago