ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಸಾವನ್ನಪ್ಪಿದ್ದ ಯುವತಿ.
ದಾಸ್ ಎಂಬವರ ಮಗಳು ಆದೀರಾ, ಮಗ ನರೇಂದ್ರ ಮತ್ತು ಅಣ್ಣನ ಮಗ ರೋಹಿತ್ ಅವರು ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯಲ್ಲಿದ್ದು ಅದಿರಾ ಮೊದಲನೇ ವರ್ಷದ ಪ್ಯಾರಮೆಡಿಕಲ್ ವ್ಯಾಸಂಗ ಮಾಡುತ್ತಿದ್ದರು.
ಇನ್ನು ಜೂ 18 ರಂದು ಆದಿತ್ಯವಾರ ರಾತ್ರಿ ಮೂವರು ಒಟ್ಟಿಗೆ ಊಟ ಮಾಡಿ ಒಂದು ಕೋಣೆಯಲ್ಲಿ ಅದಿರಾ ಮಲಗಿದ್ದು ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ. ಆದರೆ ಜೂನ್ 19 ಸೋಮವಾರ ಬೆಳಗ್ಗೆ 8 ಗಂಟೆಗೆ ಎದ್ದು ನರೇಂದ್ರ ನೋಡುವಾಗ ಅದಿರಾ ತನ್ನ ಚೂಡಿದಾರ್ ಶಾಲಿನಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು ತಕ್ಷಣ ತಂದೆ ದಾಸ್ ಅವರಿಗೆ ಈ ಬಗ್ಗೆ ತಿಳಿಸಿದ್ದಾರೆ. ಅವರು ಬಂದು ಸ್ಥಳೀಯರ ಸಹಕಾರದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮಗಳನ್ನು ಕೊಂಡು ಹೋಗಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಪರೀಕ್ಷಿಸಿದ ವೈದ್ಯರು ಯುವತಿ ಮೃತ ಪಟ್ಟಿರುವುದಾಗಿ ಧೃಡಪಡಿಸಿದ್ದಾರೆ.
ಈ ಬಗ್ಗೆ ಯುವತಿಯ ತಂದೆ ದಾಸ್ ಅವರು ಯಾವುದೋ ಕಾರಣಕ್ಕಾಗಿ ಮಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಯುವತಿಯ ಮೊಬೈಲ್ ವಿವರಗಳನ್ನು ಪರಿಶೀಲನೆ ನಡೆಸುತಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…