ಬೆಳ್ತಂಗಡಿ, : ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು ಇಬ್ಬರು ಮಹಿಳೆಯರೂ ವಶಕ್ಕೆ ಸೋಮವಾರ ಪಡೆಯಲಾಗಿದೆ.
ಬಂಧಿತರನ್ನು ಜನಾರ್ದನ ಪೂಜಾರಿ(45) ಜನಾರ್ದನ ಇಳಂತಿಲ (40) ಮತ್ತು ರಾಮಚಂದ್ರ ದೇವಾಡಿಗ (45) ಎಂಬವರೆಂದು ಗುರುತಿಸಲಾಗಿದೆ. ವೈಶ್ಯಾವಾಟಿಕೆಯಲ್ಲಿ ನೊಂದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರು ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿರುವ ರಾಮಚಂದ್ರ ದೇವಾಡಿಗ ಎಂಬವರು ಬಾಡಿಗೆಗೆ ಪಡೆದಿದ್ದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದ ಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಇನ್ನು ಬಂಧಿತ ಆರೋಪಿಗಳಲ್ಲಿ ರಾಮಚಂದ್ರ ದೇವಾಡಿಗ ತನ್ನ ಮನೆಯನ್ನೇ ಕೃತ್ಯಕ್ಕೆ ಅವಕಾಶ ನೀಡಿದ್ದಾಗಿ ತಿಳಿದು ಬಂದಿದ್ದು, ಬಂಧಿತರ ವಿರುದ್ದ ಐಪಿಸಿ ಸೆಕ್ಷನ್ 3, 4,5 (ಡಿ) ಐ.ಟಿ.ಪಿ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…