ಬೆಳ್ತಂಗಡಿ: ಬಿ.ಎಮ್.ಎಸ್ ಕಾರ್ಮಿಕ ಸಂಘದ ವತಿಯಿಂದ ಮಂಗಳೂರಿನಲ್ಲಿ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಕಟ್ಟುತ್ತಿದ್ದ ಇಬ್ಬರಿಗೆ ವಿದ್ಯುತ್ ತಂತಿ ಸ್ವರ್ಶಿಸಿ ಗಂಭೀರ ಗಾಯಗೊಂಡಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದರಲ್ಲಿ ಓರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬೆಳ್ತಂಗಡಿ ಕೋರ್ಟ್ ನಿವಾಸಿ ವ್ಯಾಸರಾಯ ಅಚಾರ್ಯ ಅವರ ಪುತ್ರ ಗೂಡ್ಸ್ ವಾಹನ ಚಾಲಕ ಪ್ರಶಾಂತ್ ಅಚಾರ್ಯ(32) ಮೃತಪಟ್ಟ ವ್ಯಕ್ತಿ. ಬೆಳ್ತಂಗಡಿ ತಾಲೂಕು ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಸಂಜೀವ ಅಚಾರ್ಯ ಅವರ ಮಗನಾದ ಸತೀಶ್(25) ಗಂಭೀರ ಗಾಯಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಟ್ಲ: ಕುಡಿದ ಮತ್ತಿನಲ್ಲಿ ತಾಯಿ ಮತ್ತು ಅಣ್ಣ ನ ಮೇಲೆ ಮಾರಾಣಾಂತಿಕ ಹಲ್ಲೆ – Vishwanews24
ಖಾಸಗಿ ಪ್ರಿಂಟರ್ಸ್ ಗೆ ಕಾರ್ಯಕ್ರಮದ ಬ್ಯಾನರ್ ಹಾಕಲು ಸಂಘದವರು ಕಾಂಟ್ರಕ್ಟ್ ನೀಡಿದ್ದು ಅದರಂತೆ ಗೂಡ್ಸ್ ಆಟೋದಲ್ಲಿ ಬ್ಯಾನರ್ ತಂದು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಸಂಜೆ ಅಳವಡಿಸುತ್ತಿದ್ದರು. ಸಂಜೆ 7 ಗಂಟೆ ಸುಮಾರಿಗೆ ಬ್ಯಾನರ್ ನ ಕಬ್ಬಿಣ ರಾಡ್ ವಿದ್ಯುತ್ ಲೈನ್ ನ ತಂತಿಗೆ ತಾಗಿದ್ದು ಈ ವೇಳೆ ಕೆಲಸದ ಇಬ್ಬರು ಯುವಕರಿಗೆ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಸ್ಥಳೀಯರ ಸಹಕಾರದಲ್ಲಿ ಇಬ್ಬರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ ಓರ್ವ ಸಾವನ್ನಪ್ಪಿದ್ದು ಇನ್ನೊಬ್ಬ ಗಂಭೀರ ಸ್ಥಿತಿಯಲ್ಲಿದ್ದಾನೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಪ್ರಿಂಕೋರ್ಟ್ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ವೈ.ಚಂದ್ರಚೂಡ್ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…