ಬೆಳ್ತಂಗಡಿ: ಭಗವಾಧ್ವಜಕಟ್ಟೆಗೆ ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕಿಡಿಗೇಡಿಗಳು ನೆಲಕ್ಕುರುಳಿಸಿದ ಘಟನೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ಎಪ್ರಿಲ್ 17ರ ರಾತ್ರಿ ಸಂಭವಿಸಿದೆ.
ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಭಗವಾಧ್ವಜವನ್ನು ಸ್ಥಾಪಿಸಿದ್ದರು. ಆದರೆ ಶನಿವಾರ ರಾತ್ರಿ ಈ ಭಗವಾಧ್ವಜ ಹಾಗೂ ಅದರ ಕಂಬ ಬುಡ ಸಮೇತ ಮುರಿದು ರಸ್ತೆಗೆ ಬಿದ್ದಿತ್ತು. ಇದು ಉದ್ದೇಶ ಪೂರ್ವಕವಾಗಿಯೇ ಮಾಡಿರುವ ಕೆಲಸ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಘಟನೆ ಕುರಿತಂತೆ ಸ್ಥಳೀಯ ಶಾಸಕ ಹರೀಶ್ ಪೂಂಜಾ ಅವರಿಗೆ ಮಾಹಿತಿ ನೀಡಿದ್ದು, ಈ ಕೃತ್ಯವನ್ನು ಖಂಡಿಸಿರುವ ಅವರು ಮತ್ತದೇ ಹಾಳುಗೆಡಹಿದ ಜಾಗದಲ್ಲಿ ಭಗವಾಧ್ವಜವನ್ನು ಹಾರಾಡುವಂತೆ ಮಾಡುವುದಾಗಿ ಹೇಳಿದರು. ಅಲ್ಲದೆ ಇನ್ನು ಮುಂದೆ ಇಂತಹ ದುಷ್ಕೃತ್ಯ ಮರುಕಳಿಸಿದರೆ ಪರಿಣಾಮ ಬೇರೆ ರೀತಿಯೇ ಆಗಿರುತ್ತದೆ ಎಂದು ದುಷ್ಕರ್ಮಿಗಳಿಗೆ ಈ ಸಂದರ್ಭ ಎಚ್ಚರಿಕೆ ನೀಡಿದ್ದಾರೆ
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…