Featured

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಜು. 8ರಿಂದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಪ್ರಕಟನೆ ತಿಳಿಸಿದೆ.

ನಿರಂತರ ಮಳೆಯಿಂದಾಗಿ ಗಡಾಯಿಕಲ್ಲು ಚಾರಣ ಮಾರ್ಗಗಳು ಜಾರುವಂತಾಗಿದ್ದು, ಇದರಿಂದ ಚಾರಣಿಗರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಾರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಹಾಗೂ ಚಾರಣ ಮಾರ್ಗಗಳ ಸುರಕ್ಷೆ ಪರಿಶೀಲಿಸಿದ ಬಳಿಕ ನಿಷೇಧ ತೆರವುಗೊಳಿಸುವ ಸಾಧ್ಯತೆ ಇದೆ.
ಜೂ. 1ರಂದು ಚಾರಣ ಆರಂಭಗೊಂಡು, ಬಳಿಕ ಕೆಲವು ದಿನಗಳಲ್ಲಿ ನಿರ್ಬಂಧ ವಿಧಿಸಲಾಗಿತ್ತು. ಆ ಬಳಿಕ ಮತ್ತೆ ಜೂ. 25ರಂದು ಮತ್ತೆ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಭಾರೀ ಮಳೆ ಹಿನ್ನೆಲೆ ಮತ್ತೆ ಜು. 8ರಿಂದ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.

Vishwa News 24

Recent Posts

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

5 minutes ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

23 minutes ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

28 minutes ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

50 minutes ago

ಸುಳ್ಯ : ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ – vishwanews24

ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ…

1 hour ago

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

1 day ago