ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಜು. 8ರಿಂದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಪ್ರಕಟನೆ ತಿಳಿಸಿದೆ.
ನಿರಂತರ ಮಳೆಯಿಂದಾಗಿ ಗಡಾಯಿಕಲ್ಲು ಚಾರಣ ಮಾರ್ಗಗಳು ಜಾರುವಂತಾಗಿದ್ದು, ಇದರಿಂದ ಚಾರಣಿಗರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಾರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಹಾಗೂ ಚಾರಣ ಮಾರ್ಗಗಳ ಸುರಕ್ಷೆ ಪರಿಶೀಲಿಸಿದ ಬಳಿಕ ನಿಷೇಧ ತೆರವುಗೊಳಿಸುವ ಸಾಧ್ಯತೆ ಇದೆ.
ಜೂ. 1ರಂದು ಚಾರಣ ಆರಂಭಗೊಂಡು, ಬಳಿಕ ಕೆಲವು ದಿನಗಳಲ್ಲಿ ನಿರ್ಬಂಧ ವಿಧಿಸಲಾಗಿತ್ತು. ಆ ಬಳಿಕ ಮತ್ತೆ ಜೂ. 25ರಂದು ಮತ್ತೆ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಭಾರೀ ಮಳೆ ಹಿನ್ನೆಲೆ ಮತ್ತೆ ಜು. 8ರಿಂದ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…