ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್ಪಿಬಿ ಕಂಪೌಂಡ್ ನಲ್ಲಿ ನಡೆದಿದೆ.
ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು.
ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭಿಸಿಲ್ಲ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಇಬ್ಬರು ಪುತ್ರರನ್ನು ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಓರ್ವ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದು, ಇನ್ನೋರ್ವ ಪುತ್ತೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿವಾಹಿತೆ. ಶಿಕ್ಷಕಿಯೂ ಆಗಿದ್ದ ಅವರ ಪತ್ನಿ ಐದು ವರ್ಷಗಳ ಹಿಂದೆ ನಿಧನರಾಗಿದ್ದರು ಎಂದು ಹೇಳಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…