Featured

ಬೆಳ್ತಂಗಡಿ: ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ವ್ಯಕ್ತಿಯ ಬರ್ಬರ ಹತ್ಯೆ – vishwanews24

ಬೆಳ್ತಂಗಡಿ: ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ.

ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು.

ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭಿಸಿಲ್ಲ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಇಬ್ಬರು ಪುತ್ರರನ್ನು ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಓರ್ವ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದು, ಇನ್ನೋರ್ವ ಪುತ್ತೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿವಾಹಿತೆ. ಶಿಕ್ಷಕಿಯೂ ಆಗಿದ್ದ ಅವರ ಪತ್ನಿ ಐದು ವರ್ಷಗಳ ಹಿಂದೆ ನಿಧನರಾಗಿದ್ದರು ಎಂದು ಹೇಳಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago