Featured

ಬೆಳ್ತಂಗಡಿ: ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಕೊಂದು ತಿಂದ ಚಿರತೆ ; ಸ್ಥಳೀಯರಲ್ಲಿ ಆತಂಕ – vishwanews24

ಬೆಳ್ತಂಗಡಿ: ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಕೊಂದು ತಿಂದ ಚಿರತೆ ; ಸ್ಥಳೀಯರಲ್ಲಿ ಆತಂಕ

ಬೆಳ್ತಂಗಡಿ : ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಬೆಳ್ತಂಗಡಿಯ ಮುಂಡೂರು ಬಳಿ ಭಾನುವಾರ ರಾತ್ರಿ ನಡೆದಿದೆ.

ಇಲ್ಲಿನ ಮುಂಡೂರು ಗ್ರಾಮದ ಕೇರಿಯಾರ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಕರುಗಳನ್ನು ಚಿರತೆ ಕೊಂದು ತಿಂದಿದೆ.

ಮನೆ ಬಳಿಕ ಕಟ್ಟಿ ಹಾಕಿದ್ದ ಕರಿಗಳ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿದ ಚಿರತೆ ತೋಟಕ್ಕೆ ಎಳೆದೊಯ್ದು ತಿಂದು ಹಾಕಿದೆ.

ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಈ ಭಾಗದಲ್ಲಿ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಸದ್ಯ ಈ ಭಾಗದಲ್ಲಿ ಮತ್ತೆ ಚಿರತೆ ಸಂಚಾರ ಕಂಡು ಬಂದಿದ್ದು, ಈ ಸಂಬಂಧ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ರಕ್ಷಣೆ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago