ಬೆಳ್ತಂಗಡಿ : ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಬೆಳ್ತಂಗಡಿಯ ಮುಂಡೂರು ಬಳಿ ಭಾನುವಾರ ರಾತ್ರಿ ನಡೆದಿದೆ.
ಇಲ್ಲಿನ ಮುಂಡೂರು ಗ್ರಾಮದ ಕೇರಿಯಾರ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಕರುಗಳನ್ನು ಚಿರತೆ ಕೊಂದು ತಿಂದಿದೆ.
ಮನೆ ಬಳಿಕ ಕಟ್ಟಿ ಹಾಕಿದ್ದ ಕರಿಗಳ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿದ ಚಿರತೆ ತೋಟಕ್ಕೆ ಎಳೆದೊಯ್ದು ತಿಂದು ಹಾಕಿದೆ.
ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಈ ಭಾಗದಲ್ಲಿ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಸದ್ಯ ಈ ಭಾಗದಲ್ಲಿ ಮತ್ತೆ ಚಿರತೆ ಸಂಚಾರ ಕಂಡು ಬಂದಿದ್ದು, ಈ ಸಂಬಂಧ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ರಕ್ಷಣೆ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…