Featured

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ – vishwanews24

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಂತ್ರಸ್ತ ಮಹಿಳೆ ನೀಡಿದ ದೂರಿನ ಪ್ರಕಾರ, 2023ರಲ್ಲಿ ರಾತ್ರಿ ವೇಳೆ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭ, ಅವರ ಸಂಬಂಧಿಕನಾದ ಸುರೇಶ್ ಎಂಬಾತ ಮನೆಗೆ ಬಂದು ಅತ್ಯಾಚಾರ ಎಸಗಿದ್ದು, ಬಳಿಕ ವಿಷಯವನ್ನು ಬಹಿರಂಗಪಡಿಸಿದರೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಕುರಿತು ಸಂತ್ರಸ್ತೆ ಜೂನ್ 7, 2026ರಂದು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 41/2026ರಡಿ ಭಾರತೀಯ ದಂಡ ಸಂಹಿತೆಯ ಕಲಂ 376 (ಅತ್ಯಾಚಾರ) ಹಾಗೂ 506 (ಜೀವ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಜೂನ್ 9ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಧರ್ಮಸ್ಥಳ ಪೊಲೀಸರು ಪ್ರಕರಣದ ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

21 minutes ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

32 minutes ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

41 minutes ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

47 minutes ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

1 hour ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

1 hour ago