ಬೆಳ್ತಂಗಡಿ : ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೇಯೇ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಇಂದು ಗುರುವಾರ ಅಪರಾಹ್ನ ನಡೆದಿದೆ.
ಮನೆ ಮಾಲಕಿ ನಾಯಿ ಜೊತೆ ಆಡವಾಡುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೂ ಗಂಭೀರ ಗಾಯ ಮಾಡಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.
ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜೊತೆ ಎಂದಿನಂತೆ ಆಟವಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ, ಇದೇ ಸಂದರ್ಭ ನಾಯಿ ಪೂರ್ಣಿಮಾ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ತಲೆಯ ಚಿಪ್ಪು ಎದ್ದು ಬರುವಷ್ಟು ಗಂಭೀರ ಗಾಯಗಳಾಗಿದೆ . ಕೈ ಕಾಲಿಗೂ ಕಚ್ಚಿ ಗಂಭೀರ ಗಾಯಮಾಡಿದೆ. ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…