ಬೆಳ್ತಂಗಡಿ : ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೇಯೇ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಇಂದು ಗುರುವಾರ ಅಪರಾಹ್ನ ನಡೆದಿದೆ.
ಮನೆ ಮಾಲಕಿ ನಾಯಿ ಜೊತೆ ಆಡವಾಡುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೂ ಗಂಭೀರ ಗಾಯ ಮಾಡಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.
ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜೊತೆ ಎಂದಿನಂತೆ ಆಟವಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ, ಇದೇ ಸಂದರ್ಭ ನಾಯಿ ಪೂರ್ಣಿಮಾ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ತಲೆಯ ಚಿಪ್ಪು ಎದ್ದು ಬರುವಷ್ಟು ಗಂಭೀರ ಗಾಯಗಳಾಗಿದೆ . ಕೈ ಕಾಲಿಗೂ ಕಚ್ಚಿ ಗಂಭೀರ ಗಾಯಮಾಡಿದೆ. ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…