ಬೆಳ್ತಂಗಡಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಸೂಚಿಸಿದರೆ ಮುಸ್ಲಿಮರ ಮತ ಬೇಡ ಎಂದಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಚೇರಿಗೆ ಮುಸ್ಲಿಮರು ಧರಿಸುವ ಟೋಪಿ ಮತ್ತು ಶಾಲು ರವಾನಿಸಲಾಗಿದೆ.
ಹರೀಶ್ ಪೂಂಜಾ ಅವರು ಹೇಳಿಕೆ ನೀಡಿರುವುದಕ್ಕೆ ಪ್ರತಿಯಾಗಿ ಬೆಳ್ತಂಗಡಿ ತಾಲೂಕಿನ ಭಾರತ ಕಮ್ಯುನಿಸ್ಟ್ ಪಕ್ಷ(ಎಂ) ಸಮಿತಿಯ ಸದಸ್ಯ ಶೇಖರ ಲಾಯಿಲ ಪ್ರತಿಭಟನಾ ಸೂಚಕವಾಗಿ ಪತ್ರದ ಜತೆ ಮುಸ್ಲಿಮರ ಪೇಟ ಮತ್ತು ಶಾಲನ್ನು ಶಾಸಕರ ಕಚೇರಿಗೆ ಕಳುಹಿಸಿದ್ದು, ಒಂದು ಕಡೆ ಮುಸ್ಲಿಮರ ಮತ ಬೇಡವೆಂದು ಸಾರ್ವಜನಿಕವಾಗಿ ಹೇಳುವುದು ಇನ್ನೊಂದು ಕಡೆ ಅದೇ ಸಮುದಾಯದವರ ಸಮಾವೇಶ ನಡೆಸಿ ಓಲೈಕೆ ಮಾಡುವ ನೀಚ ರಾಜಕೀಯ ಬುದ್ಧಿ ಬಿಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಒಂದು ಸಮುದಾಯವನ್ನು ಚುನಾವಣೆಗೆ ತಯಾರು ಮಾಡುವ ಉದ್ದೇಶದಿಂದ ಸಾರ್ವಜನಿಕ ಸಭೆಯಲ್ಲಿ ಅದರಲ್ಲೂ ಧಾರ್ಮಿಕ ಸಭೆಯಲ್ಲಿ ನನಗೆ ಮುಸ್ಲಿಮರ ಮತ ಬೇಡ ಎಂದು ಹೇಳುವುದು ಒಬ್ಬ ಬದ್ಧತೆಯುಳ್ಲ ಶಾಸಕನಿಗೆ ಸೂಕ್ತವಲ್ಲ ಎಂದಿದ್ದಾರೆ.
ಇನ್ನು ಮುಸ್ಲಿಮರ ಮತ ಬೇಡವೆಂದ ಶಾಸಕನ ನೇತೃತ್ವದಲ್ಲಿ ಜೂನ್ 22ರಂದು ಬೆಳ್ತಂಗಡಿಯಲ್ಲಿ ‘ಅಲ್ಪಸಂಖ್ಯಾತರ ಸಮಾವೇಶ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಬಿಜೆಪಿಯ ದ್ವಂದ್ವ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಶೇಖರ್ ಹೇಳಿದ್ದಾರೆ.
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…