ಬೆಳ್ತಂಗಡಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಸೂಚಿಸಿದರೆ ಮುಸ್ಲಿಮರ ಮತ ಬೇಡ ಎಂದಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಚೇರಿಗೆ ಮುಸ್ಲಿಮರು ಧರಿಸುವ ಟೋಪಿ ಮತ್ತು ಶಾಲು ರವಾನಿಸಲಾಗಿದೆ.
ಹರೀಶ್ ಪೂಂಜಾ ಅವರು ಹೇಳಿಕೆ ನೀಡಿರುವುದಕ್ಕೆ ಪ್ರತಿಯಾಗಿ ಬೆಳ್ತಂಗಡಿ ತಾಲೂಕಿನ ಭಾರತ ಕಮ್ಯುನಿಸ್ಟ್ ಪಕ್ಷ(ಎಂ) ಸಮಿತಿಯ ಸದಸ್ಯ ಶೇಖರ ಲಾಯಿಲ ಪ್ರತಿಭಟನಾ ಸೂಚಕವಾಗಿ ಪತ್ರದ ಜತೆ ಮುಸ್ಲಿಮರ ಪೇಟ ಮತ್ತು ಶಾಲನ್ನು ಶಾಸಕರ ಕಚೇರಿಗೆ ಕಳುಹಿಸಿದ್ದು, ಒಂದು ಕಡೆ ಮುಸ್ಲಿಮರ ಮತ ಬೇಡವೆಂದು ಸಾರ್ವಜನಿಕವಾಗಿ ಹೇಳುವುದು ಇನ್ನೊಂದು ಕಡೆ ಅದೇ ಸಮುದಾಯದವರ ಸಮಾವೇಶ ನಡೆಸಿ ಓಲೈಕೆ ಮಾಡುವ ನೀಚ ರಾಜಕೀಯ ಬುದ್ಧಿ ಬಿಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಒಂದು ಸಮುದಾಯವನ್ನು ಚುನಾವಣೆಗೆ ತಯಾರು ಮಾಡುವ ಉದ್ದೇಶದಿಂದ ಸಾರ್ವಜನಿಕ ಸಭೆಯಲ್ಲಿ ಅದರಲ್ಲೂ ಧಾರ್ಮಿಕ ಸಭೆಯಲ್ಲಿ ನನಗೆ ಮುಸ್ಲಿಮರ ಮತ ಬೇಡ ಎಂದು ಹೇಳುವುದು ಒಬ್ಬ ಬದ್ಧತೆಯುಳ್ಲ ಶಾಸಕನಿಗೆ ಸೂಕ್ತವಲ್ಲ ಎಂದಿದ್ದಾರೆ.
ಇನ್ನು ಮುಸ್ಲಿಮರ ಮತ ಬೇಡವೆಂದ ಶಾಸಕನ ನೇತೃತ್ವದಲ್ಲಿ ಜೂನ್ 22ರಂದು ಬೆಳ್ತಂಗಡಿಯಲ್ಲಿ ‘ಅಲ್ಪಸಂಖ್ಯಾತರ ಸಮಾವೇಶ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಬಿಜೆಪಿಯ ದ್ವಂದ್ವ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಶೇಖರ್ ಹೇಳಿದ್ದಾರೆ.
ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…
ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…
ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ ಬೆಳಗಾವಿ: ಧರ್ಮಸ್ಥಳ…
ಬಂಟ್ವಾಳ: ಯುವತಿ ನಾಪತ್ತೆ ಬಂಟ್ವಾಳ: ತಂದೆ, ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಯಿಂದ ಮಗಳು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ…
ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ : ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ…