Featured

ಬೆಳ್ತಂಗಡಿ – ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆ ; ಜನರ ಸ್ಥಳಾಂತರ – vishwanews24

ಬೆಳ್ತಂಗಡಿ ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆ ; ಜನರ ಸ್ಥಳಾಂತರ

ವೇಣೂರು: ಬೆಳ್ತಂಗಡಿ ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆಯಾಗಿದ್ದು, 15ಕ್ಕೂ ಹೆಚ್ಚು ಮನೆಗಳ ಜನರನ್ನು ಸ್ಥಳಾಂತರಿಸಲಾಗಿದೆ. ಮುಂಜಾನೆ ಸಾಧಾರಣ 3ಗಂಟೆಯ ವರೆಗೂ ಮೂಡಬಿದ್ರಿ ಪೊಲೀಸ್ ಮತ್ತು ಸ್ಥಳೀಯ ಯುವಕರು ಶ್ರಮ ವಹಿಸಿ ಜನರನ್ನು ಮಾತ್ರವಲ್ಲದೆ ದನಕರುಗಳನ್ನೂ ಸ್ಥಳಾಂತರಿಸಿದ್ದಾರೆ.

ಮೂಡಬಿದ್ರಿ ಪುರಸಭಾ ವ್ಯಾಪ್ತಿಯ ಮಾರೂರು ಗ್ರಾಮದ ದೇವಸ್ಥಾನ ಸುತ್ತಮುತ್ತ ಹಾಗೂ ಮಸೀದಿ ಪಕ್ಕದ ಸುತ್ತಮುತ್ತ ಇರುವ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿಯಾಗಿರುವ ಸಂಭವವಿದೆ.

ವೇಣೂರು, ಹೊಸಂಗಡಿ, ಅಂಗರಕರಿಯ ಹನ್ನೆರಡು ಕವಲು ಇಲ್ಲಿ ಸೇತುವೆ ಡ್ಯಾಮ್ ಗಳಲ್ಲಿ ಈ ವರೆಗೆ ಕಂಡು ಕೇಳರಿಯದಷ್ಟು ನೀರು ಹರಿದು ಬಂದು ಅನೇಕ ತೋಟ ಗದ್ದೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ ಎಂದುತಿಳಿದು ಬಂದಿದೆ.

ಕಾಜೋತ್ತು, ಮಟ್ಟು ಪೂಚೆರ್ಲೆಕ್ಕಿ, ದೇರಾರ್, ಪಾದೆ ಅರ್ಲಡ್ಕ, ತೊರ್ಪು ಆಣೆಕಟ್ಟು ಪೇರಿ, ಜಂಗಾರ್, ಕೊಡಮನಿ ಕೊದಿಂಗೇರಿ ಈ ಕಡೆ ತೋಟಕ್ಕೆ ಮನೆಗಳಿಗೆ ಹಟ್ಟಿ ಗಳಿಗೆ ನೀರು ನುಗ್ಗಿದ್ದು ಬೆಳೆ ಹಾನಿಯಾಗಿದ್ದು. ಯಾವುದೇ ಸಾವು ನೋವು ವರದಿಯಾಗಿಲ್ಲ. ಪೊಲೀಸರು, ಲೈನ್ ಮೆನ್ ಗಳು ರಾತ್ರಿ ಯಿಂದ ಮುಂಜಾನೆವರೆಗೂ ಯುವಕರೊಂದಿಗೆ ಸೇರಿಕೊಂಡು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮಾಲಾಡಿ ಸೋಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತಗೊಂಡಿದೆ.

ವೇಣೂರು ಚರ್ಚ್ ಬಳಿ ನೆರೆ ನೀರಲ್ಲಿ ಸಿಲುಕಿದ ಬಸ್ ಗಳನ್ನು ರಾತ್ರಿ1.30ಕ್ಕೆ ವೇಣೂರು ಪೊಲೀಸರ ಕಾರ್ಯಾಚರಣೆ ಮೂಲಕ ದಡ ಸೇರಿಸಲಾಯಿತು.

Vishwa News 24

Recent Posts

ರೈಲ್ವೆ ಪ್ರಯಾಣಿಕರ ಗಮನಕ್ಕೆ : ಮಂಗಳೂರು-ಬೆಂಗಳೂರು ಹಲವು ರೈಲುಗಳ ಸಂಚಾರ ಬಂದ್ -vishwanews24

ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…

3 minutes ago

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago