Featured

ಬೆಳ್ತಂಗಡಿ – ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆ ; ಜನರ ಸ್ಥಳಾಂತರ – vishwanews24

ಬೆಳ್ತಂಗಡಿ ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆ ; ಜನರ ಸ್ಥಳಾಂತರ

ವೇಣೂರು: ಬೆಳ್ತಂಗಡಿ ಮೂಡಬಿದ್ರಿ ರಾಜ್ಯಹೆದ್ದಾರಿ ಮುಳುಗಡೆಯಾಗಿದ್ದು, 15ಕ್ಕೂ ಹೆಚ್ಚು ಮನೆಗಳ ಜನರನ್ನು ಸ್ಥಳಾಂತರಿಸಲಾಗಿದೆ. ಮುಂಜಾನೆ ಸಾಧಾರಣ 3ಗಂಟೆಯ ವರೆಗೂ ಮೂಡಬಿದ್ರಿ ಪೊಲೀಸ್ ಮತ್ತು ಸ್ಥಳೀಯ ಯುವಕರು ಶ್ರಮ ವಹಿಸಿ ಜನರನ್ನು ಮಾತ್ರವಲ್ಲದೆ ದನಕರುಗಳನ್ನೂ ಸ್ಥಳಾಂತರಿಸಿದ್ದಾರೆ.

ಮೂಡಬಿದ್ರಿ ಪುರಸಭಾ ವ್ಯಾಪ್ತಿಯ ಮಾರೂರು ಗ್ರಾಮದ ದೇವಸ್ಥಾನ ಸುತ್ತಮುತ್ತ ಹಾಗೂ ಮಸೀದಿ ಪಕ್ಕದ ಸುತ್ತಮುತ್ತ ಇರುವ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿಯಾಗಿರುವ ಸಂಭವವಿದೆ.

ವೇಣೂರು, ಹೊಸಂಗಡಿ, ಅಂಗರಕರಿಯ ಹನ್ನೆರಡು ಕವಲು ಇಲ್ಲಿ ಸೇತುವೆ ಡ್ಯಾಮ್ ಗಳಲ್ಲಿ ಈ ವರೆಗೆ ಕಂಡು ಕೇಳರಿಯದಷ್ಟು ನೀರು ಹರಿದು ಬಂದು ಅನೇಕ ತೋಟ ಗದ್ದೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ ಎಂದುತಿಳಿದು ಬಂದಿದೆ.

ಕಾಜೋತ್ತು, ಮಟ್ಟು ಪೂಚೆರ್ಲೆಕ್ಕಿ, ದೇರಾರ್, ಪಾದೆ ಅರ್ಲಡ್ಕ, ತೊರ್ಪು ಆಣೆಕಟ್ಟು ಪೇರಿ, ಜಂಗಾರ್, ಕೊಡಮನಿ ಕೊದಿಂಗೇರಿ ಈ ಕಡೆ ತೋಟಕ್ಕೆ ಮನೆಗಳಿಗೆ ಹಟ್ಟಿ ಗಳಿಗೆ ನೀರು ನುಗ್ಗಿದ್ದು ಬೆಳೆ ಹಾನಿಯಾಗಿದ್ದು. ಯಾವುದೇ ಸಾವು ನೋವು ವರದಿಯಾಗಿಲ್ಲ. ಪೊಲೀಸರು, ಲೈನ್ ಮೆನ್ ಗಳು ರಾತ್ರಿ ಯಿಂದ ಮುಂಜಾನೆವರೆಗೂ ಯುವಕರೊಂದಿಗೆ ಸೇರಿಕೊಂಡು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮಾಲಾಡಿ ಸೋಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತಗೊಂಡಿದೆ.

ವೇಣೂರು ಚರ್ಚ್ ಬಳಿ ನೆರೆ ನೀರಲ್ಲಿ ಸಿಲುಕಿದ ಬಸ್ ಗಳನ್ನು ರಾತ್ರಿ1.30ಕ್ಕೆ ವೇಣೂರು ಪೊಲೀಸರ ಕಾರ್ಯಾಚರಣೆ ಮೂಲಕ ದಡ ಸೇರಿಸಲಾಯಿತು.

Vishwa News 24

Recent Posts

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

2 minutes ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

9 minutes ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

15 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

21 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

21 hours ago