ಬೆಳ್ತಂಗಡಿ: ಬೆಳ್ತಂಗಡಿ ಕುದ್ಯಾಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಗೋವು ಬಲಿಯಾಗಿದೆ. ಇಲ್ಲಿನ ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಅವರು ದನವನ್ನು ಇಂದು ಬೆಳಿಗ್ಗೆ ತೋಟದಲ್ಲಿ ಮೇಯಲು ಬಿಟ್ಟಿದ್ದರು.
ಸುಮಾರು 11 ಗಂಟೆ ಸಮಯಕ್ಕೆ ಚಿರತೆ ದನದ ಮೇಲೆ ದಾಳಿ ಮಾಡಿದೆ. ಮನೆಯವರು ತೋಟಕ್ಕೆ ಬಂದಾಗ ಚಿರತೆ ಮನೆಯವರನ್ನು ಅಟ್ಟಾಡಿಸಿದೆ.
ಚಿರತೆಯ ದಾಳಿಗೆ ದನ ಬಲಿಯಾಗಿದೆ. ಕೂಡಲೇ ಶೀನ ಪೂಜಾರಿಯವರು ಸ್ಥಳೀಯ ಪಂಚಾಯತ್ ಸದಸ್ಯ ಶುಭಕರ್ ಅವರಿಗೆ ಕರೆ ಮಾಡಿ ತಿಳಿಸಿದ್ದು, ಅವರು ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಸುಲ್ಕೇರಿ ಪಂಚಾಯತ್ ಅಧ್ಯಕ್ಷ ನಾರಾಯಾಣ ಪೂಜಾರಿ, ಅಳದಂಗಡಿ ಉಪ ಅರಣ್ಯಧಿಕಾರಿ ಸುರೇಶ್ ಗೌಡ ಹಾಗೂ ಸ್ಥಳೀಯರು ಭೇಟಿ ನೀಡಿದ್ದಾರೆ.
ಈ ಭಾಗದಲ್ಲಿ ಕಳೆದ ಕೆಲ ಸಮಯದಿಂದ ಚಿರತೆ ನಾಯಿ, ದನ, ಕೋಳಿಗಳ ಮೇಲೆ ದಾಳಿ ಮಾಡಿದೆ. ಚಿರತೆ ಹಾವಳಿಯಿಂದ ಈ ಭಾಗದ ಜನ ಭಯಬೀತರಾಗಿದ್ದಾರೆ.
ಈಗಾಗಲೇ ಬೋನ್ ಅಳವಡಿಸಲಾಗಿದೆ. ಪರಾರಿಯಾಗಿರುವ ಚಿರತೆ ಪತ್ತೆಗೆ ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…