ಬೆಳ್ತಂಗಡಿ: ಬೆಳ್ತಂಗಡಿ ಕುದ್ಯಾಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಗೋವು ಬಲಿಯಾಗಿದೆ. ಇಲ್ಲಿನ ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಅವರು ದನವನ್ನು ಇಂದು ಬೆಳಿಗ್ಗೆ ತೋಟದಲ್ಲಿ ಮೇಯಲು ಬಿಟ್ಟಿದ್ದರು.
ಸುಮಾರು 11 ಗಂಟೆ ಸಮಯಕ್ಕೆ ಚಿರತೆ ದನದ ಮೇಲೆ ದಾಳಿ ಮಾಡಿದೆ. ಮನೆಯವರು ತೋಟಕ್ಕೆ ಬಂದಾಗ ಚಿರತೆ ಮನೆಯವರನ್ನು ಅಟ್ಟಾಡಿಸಿದೆ.
ಚಿರತೆಯ ದಾಳಿಗೆ ದನ ಬಲಿಯಾಗಿದೆ. ಕೂಡಲೇ ಶೀನ ಪೂಜಾರಿಯವರು ಸ್ಥಳೀಯ ಪಂಚಾಯತ್ ಸದಸ್ಯ ಶುಭಕರ್ ಅವರಿಗೆ ಕರೆ ಮಾಡಿ ತಿಳಿಸಿದ್ದು, ಅವರು ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಸುಲ್ಕೇರಿ ಪಂಚಾಯತ್ ಅಧ್ಯಕ್ಷ ನಾರಾಯಾಣ ಪೂಜಾರಿ, ಅಳದಂಗಡಿ ಉಪ ಅರಣ್ಯಧಿಕಾರಿ ಸುರೇಶ್ ಗೌಡ ಹಾಗೂ ಸ್ಥಳೀಯರು ಭೇಟಿ ನೀಡಿದ್ದಾರೆ.
ಈ ಭಾಗದಲ್ಲಿ ಕಳೆದ ಕೆಲ ಸಮಯದಿಂದ ಚಿರತೆ ನಾಯಿ, ದನ, ಕೋಳಿಗಳ ಮೇಲೆ ದಾಳಿ ಮಾಡಿದೆ. ಚಿರತೆ ಹಾವಳಿಯಿಂದ ಈ ಭಾಗದ ಜನ ಭಯಬೀತರಾಗಿದ್ದಾರೆ.
ಈಗಾಗಲೇ ಬೋನ್ ಅಳವಡಿಸಲಾಗಿದೆ. ಪರಾರಿಯಾಗಿರುವ ಚಿರತೆ ಪತ್ತೆಗೆ ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…