ಬೆಳ್ತಂಗಡಿ : ಯುವತಿಗೆ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಬೆಳ್ತಂಗಡಿಯ ಲಾಯಿಲ ಗ್ರಾಮದ ಪುತ್ರಬೈಲು ಗುರಿಂಗಾನದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪೂಂಜಾಲಕಟ್ಟೆ ನಿವಾಸಿ ಶಮೀರ್ ಎಂದು ತಿಳಿದುಬಂದಿದೆ.
ಶಮೀರ್, ಯುವತಿಯನ್ನು ಸುಮಾರು 5 ವರ್ಷಗಳಿಂದ ಪ್ರೀತಿ ಸುತ್ತಿದ್ದು, ಮದುವೆಯಾಗಲು ಮನೆ ಬಿಟ್ಟು ಬರಲು ಒತ್ತಾಯಿಸುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದರಿಂದ ಕೋಪಗೊಂಡ ಪ್ರೇಮಿ ಮಂಗಳವಾರ ರಾತ್ರಿ 10.20ಕ್ಕೆ ಯುವತಿ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದಿದ್ದಾನೆ. ಎಡ ಕೈ, ಬಲ ಕೈಗೆ ಮತ್ತು ಕುತ್ತಿಗೆಗೆ ಗಾಯವಾಗಿದೆ. ತತ್ಕ್ಷಣ ಮನೆಮಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 448, 324, 354, 504, 506, ಐ.ಪಿ.ಸಿ.ಯಡಿ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷ ಸೇರ್ಪಡೆ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…