ಬೆಳ್ತಂಗಡಿ: ಕೆರೆಗೆ ಹಾರಿ ಅಟೋ ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ರೋಚಕ ತಿರುವು ಸಿಕ್ಕಿದೆ. ರಿಕ್ಷಾ ಚಾಲಕ ಪ್ರವೀಣ್ ಸಾವಿನ ಬಗ್ಗೆ ಅವರ ಪತ್ನಿ ಅನುಮಾನ ವ್ಯಕ್ತಪಡಿಸಿದ್ದಾರೆ. ತನ್ನ ಪತಿಯ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು ಈಬಗ್ಗೆ ತನಿಖೆ ನಡೆಸುವಂತೆ ಮೃತ ಪ್ರವೀಣ್ ಪಿಂಟೋ ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರವೀಣ್ ಪತ್ನಿ ನೀಡಿರುವ ದೂರು :
ಗುರುವಾಯನಕೆರೆಯಲ್ಲಿ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿರುವ ಪ್ರವೀಣ್ ಪಿಂಟೋ ಅವರು ಮಂಗಳವಾರ ರಾತ್ರಿ ಮನೆಯಿಂದ ಓಡಿಲ್ನಾಳ ಗ್ರಾಮದ ಅಮರ್ ಜಾಲ್ ಎಂಬಲ್ಲಿಗೆ ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದರು.
ಆತ ಮನೆಗೆ ಬಾರದಿದ್ದಾಗ ಪತ್ನಿ ಕರೆಮಾಡಿದಾಗ ರಾತ್ರಿ 1.39ಕ್ಕೆ ತಾನು ಮನೆಗೆ ಬರುತ್ತೇನೆ ಎಂದು ತಿಳಿಸಿದ್ದರು, ಆದರೆ ಮನೆಗೆ ಹಿಂತಿರುಗಿರಲಿಲ್ಲ. ಬಳಿಕ ಬುಧವಾರ ಬೆಳಿಗ್ಗೆ ಪ್ರವೀಣನ ಡ್ರೈವಿಂಗ್ ಲೈಸನ್ಸ್ ಹಾಗೂ ದಾಖಲೆಗಳು ಕೆರೆಯ ಸಮೀಪ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ ಎಂದು ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮೆಹಂದಿ ಮನೆಯಲ್ಲಿ ಪ್ರವೀಣ್ ಹಾಗೂ ಪ್ರದೀಪ್ ಶೆಟ್ಟಿ ಎಂಬವರ ಮಧ್ಯೆ ಮಾತಿನ ಚಕಮಕಿ ಹಾಗೂ ಹೊಡೆದಾಟ ನಡೆದಿರುವ ವಿಚಾರ ಬಳಿಕ ತಿಳಿದು ಬಂದಿರುವುದಾಗಿಯೂ ರಾತ್ರಿ 3 ಗಂಟೆಯ ಸುಮಾರಿಗೆ ತಮ್ಮ ಮನೆಯ ಸಮೀಪ ಕಾರೊಂದು ಬಂದು ಹೋಗಿರುವುದಾಗಿಯೂ, ಮೃತದೇಹದಲ್ಲಿ ಪ್ರವೀಣ್ ಧರಿಸಿದ್ದ ಕೆಂಪು ಟೀ ಶರ್ಟ್ ಇರಲಿಲ್ಲ ಎಂದೂ ಅವರು ದೂರಿದ್ದಾರೆ.
ಇದರಿಂದಾಗಿ ಪ್ರವೀಣ್ ಅವರ ಅಸಹಜ ಸಾವಿನ ಬಗ್ಗೆ ಹಲವಾರು ಅನುಮಾನವಿದ್ದು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮೃತನ ಪತ್ನಿ ರೇಷ್ಮಾ ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಾಹಿತಿ ನೀಡಿದ್ದಾರೆ.
ಪೊಲೀಸರಿಂದ ತನಿಖೆ ಆರಂಭ;
ಈ ದೂರಿನ ಆಧಾರದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರಂಭದಲ್ಲಿ ಇದೊಂದು ಆತ್ಮಹತ್ಯೆ ಪ್ರಕರಣ ಎಂಬ ಮಾಹಿತಿಗಳು ಹೊರ ಬಂದಿತ್ತು. ಸ್ನೇಹಿತರಿಗೆ ಕರೆ ಮಾಡಿ ಹೇಳಿದ್ದ ಎಂದೂ ಹೇಳಲಾಗಿತ್ತು. ಆದರೆ ಇದೀಗ ಪ್ರಕರಣದ ಬಗ್ಗೆ ಹಲವಾರು ಅನುಮಾನಗಳು ಸೃಷ್ಟಿಯಾಗಲಾರಂಭಿಸಿದೆ.
ಪೊಲೀಸರು ಈ ಎಲ್ಲಾ ವಿಚಾರಗಳನ್ನೂ ಗಮನದಲ್ಲಿಟ್ಟುಕೊಂಡು ಇದೀಗ ತನಿಖೆ ಆರಂಭಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದ್ದು ಇದರಿಂದ ಹೆಚ್ಚಿನ ಮಾಹಿತಿಗಳು ಲಭಿಸುವ ನಿರೀಕ್ಷೆಯಿದೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…