Featured

ಬೆಳ್ತಂಗಡಿ : ಲವ್ ಜಿಹಾದ್ ಪ್ರಕರಣ : ಸೌತಡ್ಕದಲ್ಲಿ ಹಿಂದೂಯೇತರರ ವಾಹನಕ್ಕೆ ನಿಷೇಧ ಹೇರಿ ಫ್ಲೆಕ್ಸ್ ಅಳವಡಿಕೆ

ಲವ್ ಜಿಹಾದ್ ಪ್ರಕರಣ : ಸೌತಡ್ಕದಲ್ಲಿ ಹಿಂದೂಯೇತರರ ವಾಹನಕ್ಕೆ ನಿಷೇಧ ಹೇರಿ ಫ್ಲೆಕ್ಸ್ ಅಳವಡಿಕೆ

ಬೆಳ್ತಂಗಡಿ: ಜಿಲ್ಲೆಯಲ್ಲಿ ಕೋಮ ಸೌಹಾರ್ದ ಕೆಡಿಸುವ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಕೊಕ್ಕಡದಲ್ಲಿ ಇತ್ತೀಚೆಗೆ ಆಟೋ ಚಾಲಕನ ಲವ್ ಜಿಹಾದ್ ಪ್ರಕರಣ ಹಿನ್ನಲೆಯಲ್ಲಿ ಕೊಕ್ಕಡ ಸೌತಡ್ಕ ದೇವಸ್ಥಾ‌ನಕ್ಕೆ ತೆರಳುವ ರಸ್ತೆಯಲ್ಲಿ ಹಿಂದೂಯೇತರರ ಆಟೋ, ಟ್ಯಾಕ್ಸಿ ಇನ್ನಿತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಕಟೌಟ್ ಒಂದು ಅಳವಡಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕೊಕ್ಕಡದ ಅನ್ಯಕೋಮಿನ ಯುವಕನೊಂದಿಗೆ ಯುವತಿಯ ಪ್ರೇಮಾಂಕುರ ವಿಷಯಕ್ಕೆ ಸಂಬಂಧಿಸಿ ಹಿಂದೂ ಸಂಘಟನೆಗಳು ಯುವಕನಿಗೆ ಎಚ್ಚರಿಕೆ ನೀಡಿದ ಘಟನೆ ನಡೆದ ಬೆನ್ನಲ್ಲೇ ಜೂ.3 ರಂದು ಈ ಕಟೌಟ್ ಸಾರ್ವಜನಿಕ ಸ್ಥಳದಲ್ಲಿ ಕಂಡುಬಂದಿದೆ.

ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂಜಾಗರಣ ವೇದಿಕೆ ಕೊಕ್ಕಡ ಪ್ರಕಟನೆ ಎಂದು ಬರೆದಿದ್ದು, ಬಳಿಕ ಹಿಂದೂ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯ ಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕೃತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರರ, ಆಟೋ ಮತ್ತು ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಬರೆಯಲಾಗಿದೆ.

ಈ ಕುರಿತು ಸೌತಡ್ಕ ಆಡಳಿತ ಮಂಡಳಿಯಲ್ಲಿ ಪ್ರಶ್ನಿಸಿದಾಗ ಸಾರ್ವಜನಿಕ ಪ್ರದೇಶದಲ್ಲಿ ಅಳವಡಿಸಿದ್ದರಿಂದ ದೇವಸ್ಥಾನಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಟೌಟ್ ಫೋಟೋ ಹರಿದಾಡುತ್ತಿದ್ದು, ಕಟೌಟ್ ಅಳವಡಿಸಿರುವವರ ಕುರಿತು ಸಂಬಂಧ ಪಟ್ಟ ಪೊಲೀಸ್ ಇಲಾಖೆ ವಿಚಾರಣೆಗೆ ಮುಂದಾಗಿದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago