Featured

ಬೆಳ್ತಂಗಡಿ : ವಯೋ ವೃದ್ಧ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಮನೆ ಮಂದಿ -Vishwanews24

ಬೆಳ್ತಂಗಡಿ : ವಯೋ ವೃದ್ಧ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಮನೆ ಮಂದಿ -Vishwanews24

ಬೆಳ್ತಂಗಡಿ :ವಯೋ ವೃದ್ಧ ತಾಯಿಯನ್ನು ಮನೆ ಮಂದಿ ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ವಿಪರ್ಯಾಸವೆಂದರೆ, ಈ ವೃದ್ಧೆ ತಾಯಿಯ ಮಕ್ಕಳ ಪೈಕಿ ಒಬ್ಬರು ಆಶಾ ಕಾರ್ಯಕರ್ತೆಯಾಗಿದ್ದು, ಪುತ್ರನೊಬ್ಬ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ತಿಳಿದುಬಂದಿದೆ.

ಈ ವೃದ್ಧೆಗೆ‌ 5‌ ಮಕ್ಕಳಿದ್ದು, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಒಬ್ಬ ಪುತ್ರ ಮಂಗಳೂರಿನಲ್ಲಿ ಪೊಲೀಸ್ ಆಗಿ ಕರ್ತವ್ಯ ‌ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಮೇಸ್ತ್ರಿ ಕೆಲಸ ಮಾಡುತ್ತಿದ್ದಾರೆ. ಪುತ್ರಿಯರಲ್ಲಿ ಒಬ್ಬರು ಗೃಹಿಣಿಯಾಗಿದ್ದು, ಮತ್ತೊಬ್ಬರು ಆಶಾ ಕಾರ್ಯಕರ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ವೃದ್ಧೆಯ ಮಕ್ಕಳ ಅಮಾನವೀಯ ‌ನಡೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಉಡುಪಿ : ಜಿಲ್ಲೆಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ವೃದ್ಧೆಯನ್ನು ಬಿಟ್ಟು ಹೋಗಿರುವ ಬಗ್ಗೆ ದ.ಕ ಜಿಲ್ಲಾ 112 ಸಹಾಯವಾಣಿಗೆ ಕರೆ ಬಂದಿದ್ದು, ತಕ್ಷಣ ತುರ್ತು ಸ್ಪಂದನ ವಾಹನ ಸ್ಥಳಕ್ಕೆ ತೆರಳಿ ವೃದ್ಧೆಯನ್ನು ರಕ್ಷಿಸಿದೆ. ಮನೆಯವರಿಗೆ ಸೂಕ್ತ ಮಾಹಿತಿ ನೀಡಿ ವೃದ್ಧೆಯನ್ನು ಅವರ ಪುತ್ರಿಯ ಮನೆಗೆ ಕಳುಹಿಸಲಾಗಿದೆ‌. ಮನೆಯವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಬೆಳ್ತಂಗಡಿ ಠಾಣೆಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಮನೆಯವರನ್ನು ಸಂಪರ್ಕಿಸಿದ್ದು, ಮಾಹಿತಿ ಪಡೆದು ಅವರ ಮೇಲೆ ಕ್ರಮ ಜರುಗಿಸುವ ಮಾಹಿತಿ ಲಭ್ಯವಾಗಿದೆ.

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯರ ಮೊಬೈಲ್ ಬಳಕೆ ನಿಷೇಧ -Vishwanews24

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

14 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

14 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

15 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

16 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

16 hours ago