ಬೆಳ್ತಂಗಡಿ :ವಯೋ ವೃದ್ಧ ತಾಯಿಯನ್ನು ಮನೆ ಮಂದಿ ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ವಿಪರ್ಯಾಸವೆಂದರೆ, ಈ ವೃದ್ಧೆ ತಾಯಿಯ ಮಕ್ಕಳ ಪೈಕಿ ಒಬ್ಬರು ಆಶಾ ಕಾರ್ಯಕರ್ತೆಯಾಗಿದ್ದು, ಪುತ್ರನೊಬ್ಬ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ತಿಳಿದುಬಂದಿದೆ.
ಈ ವೃದ್ಧೆಗೆ 5 ಮಕ್ಕಳಿದ್ದು, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಒಬ್ಬ ಪುತ್ರ ಮಂಗಳೂರಿನಲ್ಲಿ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಮೇಸ್ತ್ರಿ ಕೆಲಸ ಮಾಡುತ್ತಿದ್ದಾರೆ. ಪುತ್ರಿಯರಲ್ಲಿ ಒಬ್ಬರು ಗೃಹಿಣಿಯಾಗಿದ್ದು, ಮತ್ತೊಬ್ಬರು ಆಶಾ ಕಾರ್ಯಕರ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ವೃದ್ಧೆಯ ಮಕ್ಕಳ ಅಮಾನವೀಯ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಉಡುಪಿ : ಜಿಲ್ಲೆಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ವೃದ್ಧೆಯನ್ನು ಬಿಟ್ಟು ಹೋಗಿರುವ ಬಗ್ಗೆ ದ.ಕ ಜಿಲ್ಲಾ 112 ಸಹಾಯವಾಣಿಗೆ ಕರೆ ಬಂದಿದ್ದು, ತಕ್ಷಣ ತುರ್ತು ಸ್ಪಂದನ ವಾಹನ ಸ್ಥಳಕ್ಕೆ ತೆರಳಿ ವೃದ್ಧೆಯನ್ನು ರಕ್ಷಿಸಿದೆ. ಮನೆಯವರಿಗೆ ಸೂಕ್ತ ಮಾಹಿತಿ ನೀಡಿ ವೃದ್ಧೆಯನ್ನು ಅವರ ಪುತ್ರಿಯ ಮನೆಗೆ ಕಳುಹಿಸಲಾಗಿದೆ. ಮನೆಯವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಬೆಳ್ತಂಗಡಿ ಠಾಣೆಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಮನೆಯವರನ್ನು ಸಂಪರ್ಕಿಸಿದ್ದು, ಮಾಹಿತಿ ಪಡೆದು ಅವರ ಮೇಲೆ ಕ್ರಮ ಜರುಗಿಸುವ ಮಾಹಿತಿ ಲಭ್ಯವಾಗಿದೆ.
ವಿಧಾನಪರಿಷತ್ ಕಲಾಪದಲ್ಲಿ ಸದಸ್ಯರ ಮೊಬೈಲ್ ಬಳಕೆ ನಿಷೇಧ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…