ಬೆಳ್ತಂಗಡಿ :ವಯೋ ವೃದ್ಧ ತಾಯಿಯನ್ನು ಮನೆ ಮಂದಿ ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ವಿಪರ್ಯಾಸವೆಂದರೆ, ಈ ವೃದ್ಧೆ ತಾಯಿಯ ಮಕ್ಕಳ ಪೈಕಿ ಒಬ್ಬರು ಆಶಾ ಕಾರ್ಯಕರ್ತೆಯಾಗಿದ್ದು, ಪುತ್ರನೊಬ್ಬ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ತಿಳಿದುಬಂದಿದೆ.
ಈ ವೃದ್ಧೆಗೆ 5 ಮಕ್ಕಳಿದ್ದು, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಒಬ್ಬ ಪುತ್ರ ಮಂಗಳೂರಿನಲ್ಲಿ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಮೇಸ್ತ್ರಿ ಕೆಲಸ ಮಾಡುತ್ತಿದ್ದಾರೆ. ಪುತ್ರಿಯರಲ್ಲಿ ಒಬ್ಬರು ಗೃಹಿಣಿಯಾಗಿದ್ದು, ಮತ್ತೊಬ್ಬರು ಆಶಾ ಕಾರ್ಯಕರ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ವೃದ್ಧೆಯ ಮಕ್ಕಳ ಅಮಾನವೀಯ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಉಡುಪಿ : ಜಿಲ್ಲೆಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ವೃದ್ಧೆಯನ್ನು ಬಿಟ್ಟು ಹೋಗಿರುವ ಬಗ್ಗೆ ದ.ಕ ಜಿಲ್ಲಾ 112 ಸಹಾಯವಾಣಿಗೆ ಕರೆ ಬಂದಿದ್ದು, ತಕ್ಷಣ ತುರ್ತು ಸ್ಪಂದನ ವಾಹನ ಸ್ಥಳಕ್ಕೆ ತೆರಳಿ ವೃದ್ಧೆಯನ್ನು ರಕ್ಷಿಸಿದೆ. ಮನೆಯವರಿಗೆ ಸೂಕ್ತ ಮಾಹಿತಿ ನೀಡಿ ವೃದ್ಧೆಯನ್ನು ಅವರ ಪುತ್ರಿಯ ಮನೆಗೆ ಕಳುಹಿಸಲಾಗಿದೆ. ಮನೆಯವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಬೆಳ್ತಂಗಡಿ ಠಾಣೆಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಮನೆಯವರನ್ನು ಸಂಪರ್ಕಿಸಿದ್ದು, ಮಾಹಿತಿ ಪಡೆದು ಅವರ ಮೇಲೆ ಕ್ರಮ ಜರುಗಿಸುವ ಮಾಹಿತಿ ಲಭ್ಯವಾಗಿದೆ.
ವಿಧಾನಪರಿಷತ್ ಕಲಾಪದಲ್ಲಿ ಸದಸ್ಯರ ಮೊಬೈಲ್ ಬಳಕೆ ನಿಷೇಧ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]