ಬೆಳ್ತಂಗಡಿ : ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.
ಈ ಬಗ್ಗೆ ಮಾಧ್ಯಮಗಳ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಘಟನೆಯ ಬಗ್ಗೆ ಬಳಂಜ ನಿವಾಸಿ ಧರಣೇಂದ್ರ ಎಂಬವರು ನೀಡಿದ ದೂರಿನಂತೆ ಪಿಕಪ್ ವಾಹನ ಚಾಲಕ ನವೀನ್, ಟಿಪ್ಪರ್ ಚಾಲಕ ಪ್ರವೀಣ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…