ಬೆಳ್ತಂಗಡಿ :ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿ ಮದ್ರಸಾ ಶಿಕ್ಷಕನಿಗೆ ಬೆಳ್ತಂಗಡಿ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.
ಆರೋಪಿ ಮೂಡಿಗೆರೆ ತಾಲೂಕಿನ ಬಣ್ಣ ಮೂಲದ ಮದ್ರಸಾ ಶಾಲೆಯ ಶಿಕ್ಷಕ ಮುಹಮ್ಮದ್ ಸೈಫುಲ್ಲಾನ ಎಂದು ಗುರುತಿಸಲಾಗಿದೆ.
ಧರ್ಮಸ್ಥಳ-ಪುತ್ತೂರು ಕೆಎಸ್ಆರ್ಟಿಸಿ ಬಸ್ ಉಪ್ಪಿನಂಗಡಿ ಸಮೀಪದ ಇಳಂತಿಲ ಕಡವಿನಬಾಗಿಲು ಎಂಬಲ್ಲಿ ಹೋಗುತ್ತಿದ್ದ ವೇಳೆ ಅದೇ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಆರೋಪಿ ಮುಹಮ್ಮದ್ ಸೈಫುಲ್ಲಾನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ತನಿಖೆ ಬಳಿಕ ಆರೋಪಿ ವಿರುದ್ಧ ಪೊಲೀಸರು ಬೆಳ್ತಂಗಡಿ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ದೇವರಾಜ ಎಚ್.ಎಂ. ಅವರು ಆರೋಪಿ ಮುಹಮ್ಮದ್ ಸೈಫುಲ್ಲಾ ಅಪರಾಧಿ ಎಂದು ಘೋಷಿಸಿ ಆತನಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…