ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವು ಜೀವಗಳನ್ನು ಬಲಿ ಪಡೆದಿದೆ. ಇದೀಗ ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾವನ್ನಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಗಣೇಶ್ ಶೆಟ್ಟಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃತ ದುರ್ದೈವಿ. ಯುವತಿ ಕಲ್ಲಡ್ಕದ ಮೆಡಿಕಲೊಂದರಲ್ಲಿ ಕೆಲಸ ಮಾಡುತ್ತಿದ್ದಳು.
ಪ್ರತೀಕ್ಷಾ ಶೆಟ್ಟಿ ಮನೆಯ ಬಳಿ ಪಾರ್ಸೆಲ್ ಬಂದಿದೆ ಎಂದು ತೆಗೆದುಕೊಂಡು ಹೋಗಲು ಮನೆ ಸಮೀಪದ ರಸ್ತೆಗೆ ಬಂದಿದ್ದಾಳೆ. ರಸ್ತೆಯಲ್ಲಿ ವಿದ್ಯುತ್ ತಂತಿ ಮುರಿದು ಬಿದ್ದಿದ್ದು, ನೀರಿಗೆ ವಿದ್ಯುತ್ ಪ್ರವಹಿಸಿದೆ. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಯುವತಿ ಮೃತಪಟ್ಟಿದ್ದಾಳೆ.
ಮೆಸ್ಕಾಂ ಇಲಾಖೆ ನಿರ್ಲಕ್ಷ್ಯವೇ ಯುವತಿ ಸಾವಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆಯವರು ಕಳೆದ ಕೆಲವು ಸಮಯಗಳಿಂದ ಅಪಾಯಕಾರಿ ವಿದ್ಯುತ್ ತಂತಿ ಹಾಗೂ ಕಂಬ ತೆರವುಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಮನವಿ ನೀಡಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಇಂತಹ ಘಟನೆ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ.
ಆದ್ದರಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಮನೆಯವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದಾರೆ. ಮೆಸ್ಕಾಂ ಇಲಾಖೆಯಿಂದ ಈಗಾಗಲೇ ರೂ 5 ಲಕ್ಷ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರೂ. 25 ಲಕ್ಷ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…