ಬೆಳ್ತಂಗಡಿ: ರಾಜ್ಯದ ಸಣ್ಣ ನೀರಾವರಿ ಇಲಾಖೆ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಶನಿವಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಹಿನ್ನೆಲೆ ಕ್ಷೇತ್ರಕ್ಕೆ ಆಗಮಿಸಿದ್ದಾರೆ.
ಮಾರ್ಗ ಮಧ್ಯ ಶಾಸಕ ಹರೀಶ್ ಪೂಂಜ ಅವರ ಶ್ರಮಿಕ ಕಚೇರಿಗೆ ಭೇಟಿ ನೀಡಿದರು. ಇದೇ ವೇಳೆ ಶಾಸಕರು ಸಚಿವರನ್ನು ಬರಮಾಡಿಕೊಂಡರು. ಈವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿ.ಪಂ. ಸದಸ್ಯರು, ಪ.ಪಂ. ನಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯರು, ಬಿಜೆಪಿ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಭೇಟಿ ನೀಡುವ ಸಲುವಾಗಿ ಸನ್ನಿಧಾನಕ್ಕೆ ತೆರಳಿದರು. ಮಂಜುನಾಥ ಸ್ವಾಮಿ ದರ್ಶನ ಪಡೆದು, ಧರ್ಮಾಧಿಕಾರಿ ಡಾ.ಡಿ.ವೇರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಲಿರುವ ಅವರು ವಿವಿಧ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸುವರು.
ಚಿನ್ನದ ಸರ ಕಳ್ಳತನವಾಗಿದೆ ಎಂದ ಅಜ್ಜಿ:ಪೊಲೀಸರ ತನಿಖೆಯ ವೇಳೆ ಬಯಲಾಯ್ತು ಬೆಚ್ಚಿ ಬೀಳುವ ರಹಸ್ಯ
ಬೆಳಗ್ಗೆ 10.30 ಕ್ಕೆ ನಿಟ್ಟಡೆ ಗ್ರಾಮದ ಕುಕ್ಕುಜೊಟ್ಟು ಕಿಂಡಿ ಆಣೆಕಟ್ಟು ಕಾಮಗಾರಿ ಉದ್ಘಾಟನೆ ನೆರವೇರಿಸುವರು. ಅಪರಾಹ್ನ 2:30ಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಸಚಿವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ 4 ಗಂಟೆಗೆ ಕಲ್ಮಂಜ ಗ್ರಾಮದ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ, ಬಳಿ ನಿರ್ಮಾಣಗೊಳ್ಳಲಿರುವ ಸೇತುವೆ ಸಹಿತ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸುವರು.ಈ ವೇಳೆ ಸಚಿವ ಎಸ್.ಅಂಗಾರ ಅವರಿಗೂ ಅಭಿನಂದನೆ ನಡೆಯಲಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…