Featured

ಬೆಳ್ತಂಗಡಿ : ವಿನೂತನ ಶೈಲಿಯ ಪ್ಯಾಂಟ್ ಧರಿಸಿದ್ದ ಹುಡುಗನಿಗೆ ಸ್ನೇಹಿತರಿಂದ ಅವಮಾನ:ನೊಂದ ಯುವಕ ಆತ್ಮಹತ್ಯೆಗೆ ಯತ್ನ ; ಆಸ್ಪತ್ರೆಗೆ ದಾಖಲು – vishwanews24

ಬೆಳ್ತಂಗಡಿ : ವಿನೂತನ ಶೈಲಿಯ ಪ್ಯಾಂಟ್ ಧರಿಸಿದ್ದ ಹುಡುಗನಿಗೆ ಸ್ನೇಹಿತರಿಂದ ಅವಮಾನ:ನೊಂದ ಯುವಕ ಆತ್ಮಹತ್ಯೆಗೆ ಯತ್ನ ; ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಯುವಕನೊಬ್ಬ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಮಂದಿಯ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್‌ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಮಾಜಿಕ ಜಾಲತಾಣದಲ್ಲಿ ಹಾಕಿದ್ದು. ಬಳಿಕ ಈ ವಿಡಿಯೋ ನೋಡಿದ ಯುವಕ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್ , ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಎಂಬವರು ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಎಂಬ ಯುವಕ ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಧರಿಸಿ ‌ ಗುರುವಾರ ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಈ ವೇಳೆ ಮಾರುಕಟ್ಟೆಯಲ್ಲಿದ್ದ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು, ಅದನ್ನು ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದಾರೆ.

ವಿಡಿಯೋ ಮೂಲಕ ಟ್ರೋಲ್ ಮಾಡಿದ್ದರಿಂದ ಮಾನಸಿಕವಾಗಿ ನೊಂದ ಶಾಹಿಲ್ ಗುರುವಾರ ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

ಕೂಡಲೇ ಮನೆಯವರು ಆತನನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಧ್ಯ ಘಟನೆಯ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

3 hours ago