Featured

ಬೆಳ್ತಂಗಡಿ : ವಿನೂತನ ಶೈಲಿಯ ಪ್ಯಾಂಟ್ ಧರಿಸಿದ್ದ ಹುಡುಗನಿಗೆ ಸ್ನೇಹಿತರಿಂದ ಅವಮಾನ:ನೊಂದ ಯುವಕ ಆತ್ಮಹತ್ಯೆಗೆ ಯತ್ನ ; ಆಸ್ಪತ್ರೆಗೆ ದಾಖಲು – vishwanews24

ಬೆಳ್ತಂಗಡಿ : ವಿನೂತನ ಶೈಲಿಯ ಪ್ಯಾಂಟ್ ಧರಿಸಿದ್ದ ಹುಡುಗನಿಗೆ ಸ್ನೇಹಿತರಿಂದ ಅವಮಾನ:ನೊಂದ ಯುವಕ ಆತ್ಮಹತ್ಯೆಗೆ ಯತ್ನ ; ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಯುವಕನೊಬ್ಬ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಮಂದಿಯ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್‌ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಮಾಜಿಕ ಜಾಲತಾಣದಲ್ಲಿ ಹಾಕಿದ್ದು. ಬಳಿಕ ಈ ವಿಡಿಯೋ ನೋಡಿದ ಯುವಕ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್ , ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಎಂಬವರು ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಎಂಬ ಯುವಕ ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಧರಿಸಿ ‌ ಗುರುವಾರ ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಈ ವೇಳೆ ಮಾರುಕಟ್ಟೆಯಲ್ಲಿದ್ದ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು, ಅದನ್ನು ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದಾರೆ.

ವಿಡಿಯೋ ಮೂಲಕ ಟ್ರೋಲ್ ಮಾಡಿದ್ದರಿಂದ ಮಾನಸಿಕವಾಗಿ ನೊಂದ ಶಾಹಿಲ್ ಗುರುವಾರ ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

ಕೂಡಲೇ ಮನೆಯವರು ಆತನನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಧ್ಯ ಘಟನೆಯ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

18 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago