Featured

ಬೆಳ್ತಂಗಡಿ: ವ್ಯಕ್ತಿ ನಾಪತ್ತೆ – vishwanews24

ಬೆಳ್ತಂಗಡಿ: ವ್ಯಕ್ತಿ ನಾಪತ್ತೆ

ಬೆಳ್ತಂಗಡಿ : ಬೆಳ್ತಂಗಡಿಯ ಚರ್ಚ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ನಾಪತ್ತೆಯಾದವರನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ದೇವಸ್ಯ ನಿವಾಸಿ ರೋಶನ್ ಕಿರಣ್ ಡಿಸೋಜಾ (36) ಎಂದು ಗುರುತಿಸಲಾಗಿದೆ. ಇವರು ಬೆಳ್ತಂಗಡಿಯ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು, ಪಿಕಪ್ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಬೆಂಗಳೂರಿನಲ್ಲಿದ್ದ ತಮ್ಮ ಪತ್ನಿಗೆ ಕರೆ ಮಾಡಿದ್ದ ರೋಶನ್, ಜನವರಿ 25 ರಂದು ತಾವು ಬೆಂಗಳೂರಿಗೆ ಬರುವುದಾಗಿ ತಿಳಿಸಿದ್ದರು. ಅದರಂತೆ ಅಂದು ಬೆಳಿಗ್ಗೆ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಬಸ್ ಏರಿದ್ದರು. ಆದರೆ, ಸಂಜೆಯಾದರೂ ಅವರು ಬೆಂಗಳೂರು ತಲುಪಲಿಲ್ಲ ಮತ್ತು ಪತ್ನಿಯ ಫೋನ್ ಕರೆಗಳಿಗೂ ಸ್ಪಂದಿಸಲಿಲ್ಲ. ತದನಂತರ, ತಾವು ಇನ್ನು ಮುಂದೆ ಇರುವುದಿಲ್ಲ ಎಂಬರ್ಥದ ವಾಟ್ಸಾಪ್ ಸಂದೇಶವೊಂದನ್ನು ಪತ್ನಿಗೆ ಕಳುಹಿಸಿದ್ದಾರೆ.

ಸಂದೇಶದಿಂದ ಆತಂಕಗೊಂಡ ಪತ್ನಿ ತಕ್ಷಣ ಬೆಳ್ತಂಗಡಿಗೆ ಧಾವಿಸಿ ಬಾಡಿಗೆ ಮನೆಯನ್ನು ಪರಿಶೀಲಿಸಿದಾಗ ರೋಶನ್ ಅಲ್ಲಿರಲಿಲ್ಲ. ನೆರೆಹೊರೆಯವರಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಅವರು ನಾಪತ್ತೆಯಾಗಿರುವುದು ದೃಢಪಟ್ಟಿದೆ.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ರೋಶನ್ ಕಿರಣ್ ಡಿಸೋಜಾ ಅವರ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ಸಿಕ್ಕಲ್ಲಿ ತಕ್ಷಣ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

11 hours ago