ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆಯನ್ನು ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಹಾಗೂ ಪ್ರಮುಖ ಸಾಕ್ಷಿಯಾಗಿರುವ ಹರೀಶ್ ಮುಗೇರ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ 2022ರ ಡಿಸೆಂಬರ್ 18ರಂದು ನಡೆದ ಶ್ರೀಧರ(30) ಕೊಲೆ ಪ್ರಕರಣದಲ್ಲಿ ದೂರುದಾರನಾಗಿರುವ ಹರೀಶ್ ಬಿ. ಮುಗೇರ ಕಳೆದ (ಮಾ.11ರಂದು) ರಾತ್ರಿ ಶಿಬಾಜೆಯ ಸಾರಾ ಫಾರ್ಮ್ ತೋಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಅವರ ಜೊತೆಗೆ ಇದ್ದವರು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ :

 ಟಿಪ್ಪರ್ ಲಾರಿ ಡಿಕ್ಕಿ : ಮೆಡಿಕಲ್​ ಕಾಲೇಜು ವಿದ್ಯಾರ್ಥಿನಿ ಸಾವು – vishwanews24

ಶ್ರೀಧರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಮಾ.3 ರಂದು ವಿಚಾರಣೆಗಾಗಿ ನೋಟಿಸ್ ನೀಡಿ ಹರೀಶ್ ರನ್ನು ಕರೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಬಳಿಕ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದರು. ಈ ಮಧ್ಯೆ ಹರೀಶ್ ಆತ್ಮಹತ್ಯೆಗೆ ಯತ್ನಿಸದಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Leave a Reply