ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ವಾಪಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣಕ್ಕೆ ಸಿಐಡಿ ತನಿಖೆ ಆರಂಭಗೊಂಡಿದೆ.
ಇಂದು ಸೊಸೈಟಿಗೆ ಬೆಂಗಳೂರಿನಿಂದ ಸಿಐಡಿ ತನಿಖಾ ತಂಡ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದೆ.
ಇದನ್ನೂ ಓದಿ :
ಪ್ರಕರಣದ ವಿವರ:
ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದದಲ್ಲಿ ಸುಮಾರು 25 ವರ್ಷಗಳಿಂದ ಏಕೈಕ ಬ್ರಾಂಚ್ ಆಗಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ)ಯಲ್ಲಿ ಆಡಳಿತ ಮಂಡಳಿಯವರು ಗ್ರಾಹಕರಿಗೆ ಸೇರಿದ ಠೇವಣಿ ಹಣ ಸುಮಾರು 40 ಕೋಟಿ ರೂ.ನ್ನು ಗ್ರಾಹಕರಿಗೆ ಹಿಂದಿರುಗಿಸದೆ ವಂಚಿಸಿರುವ ಆರೋಪ ಕೇಳಿಬಂದಿತ್ತು. ಈ ಸಂಬಂಧ ವಂಚನೆಗೊಳಗಾದ ಬೆಳ್ತಂಗಡಿ ನಿವಾಸಿ ದಯಾನಂದ ನಾಯಕ್ ಸೇರಿ ಒಟ್ಟು 13 ಮಂದಿ ಗ್ರಾಹಕರು ಸೊಸೈಟಿಯ 14 ಜನರ ವಿರುದ್ಧ 22-05-2025ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸಿಐಡಿ ತನಿಖೆ ಆರಂಭ:
40 ಕೋಟಿ ರೂ. ವಂಚನೆ ಪ್ರಕರಣವಾಗಿರುವ ಕಾರಣ ಇದರ ತನಿಖೆಯನ್ನು ಬೆಳ್ತಂಗಡಿ ಪೊಲೀಸರು ಮಂಗಳೂರು ಸೆನ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದರು ಬಳಿಕ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದರು. ಅದರಂತೆ ಇದೀಗ ಅಧಿಕೃತವಾಗಿ ಬೆಂಗಳೂರು ಸಿಐಡಿ ಇನ್ ಸ್ಪೆಕ್ಟರ್ ಹರೀಶ್ ನೇತೃತ್ವದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ :
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…