Featured

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಸಿಐಡಿ ತನಿಖೆ ಆರಂಭ – vishwanews24

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಸಿಐಡಿ ತನಿಖೆ ಆರಂಭ

ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ವಾಪಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣಕ್ಕೆ ಸಿಐಡಿ ತನಿಖೆ ಆರಂಭಗೊಂಡಿದೆ.

ಇಂದು ಸೊಸೈಟಿಗೆ ಬೆಂಗಳೂರಿನಿಂದ ಸಿಐಡಿ ತನಿಖಾ ತಂಡ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದೆ.

ಇದನ್ನೂ ಓದಿ :

ಪ್ರಕರಣದ ವಿವರ:

ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದದಲ್ಲಿ ಸುಮಾರು 25 ವರ್ಷಗಳಿಂದ ಏಕೈಕ ಬ್ರಾಂಚ್ ಆಗಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ)ಯಲ್ಲಿ ಆಡಳಿತ ಮಂಡಳಿಯವರು ಗ್ರಾಹಕರಿಗೆ ಸೇರಿದ ಠೇವಣಿ ಹಣ ಸುಮಾರು 40 ಕೋಟಿ ರೂ.ನ್ನು ಗ್ರಾಹಕರಿಗೆ ಹಿಂದಿರುಗಿಸದೆ ವಂಚಿಸಿರುವ ಆರೋಪ ಕೇಳಿಬಂದಿತ್ತು. ಈ ಸಂಬಂಧ ವಂಚನೆಗೊಳಗಾದ ಬೆಳ್ತಂಗಡಿ ನಿವಾಸಿ ದಯಾನಂದ ನಾಯಕ್ ಸೇರಿ ಒಟ್ಟು 13 ಮಂದಿ ಗ್ರಾಹಕರು ಸೊಸೈಟಿಯ 14 ಜನರ ವಿರುದ್ಧ 22-05-2025ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಿಐಡಿ ತನಿಖೆ ಆರಂಭ:

40 ಕೋಟಿ ರೂ. ವಂಚನೆ ಪ್ರಕರಣವಾಗಿರುವ ಕಾರಣ ಇದರ ತನಿಖೆಯನ್ನು ಬೆಳ್ತಂಗಡಿ ಪೊಲೀಸರು ಮಂಗಳೂರು ಸೆನ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದರು ಬಳಿಕ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದರು. ಅದರಂತೆ ಇದೀಗ ಅಧಿಕೃತವಾಗಿ ಬೆಂಗಳೂರು ಸಿಐಡಿ ಇನ್ ಸ್ಪೆಕ್ಟರ್ ಹರೀಶ್ ನೇತೃತ್ವದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

3 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

3 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 days ago