ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಕಾಲೇಜು ಉಪನ್ಯಾಸಕಿ ನಿಧನ – Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಕಾಲೇಜು ಉಪನ್ಯಾಸಕಿ ನಿಧನ – Vishwanews24

ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ (40ವ) ಅವರು ಹೃದಯಾಘಾತದಿಂದ ಜು.14 ರಂದು ಮೃತಪಟ್ಟಿರುವ ಘಟನೆ ನಡೆದಿದೆ.

ಮಲ್ಲಿಕಾ ಅವರ ಆರೋಗ್ಯದಲ್ಲಿ ಇಂದು ಏರುಪೇರು ಕಂಡಿದ್ದು ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇನ್ನು ಮಲ್ಲಿಕಾ ಅವರು ಪಿಲಿಚಂಡಿ ಕಲ್ಲು ನಿವಾಸಿಯಾಗಿದ್ದು, ಪ್ರಸ್ತುತ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತರು ಪತಿ, ತಂದೆ, ತಾಯಿ ಹಾಗೂ ಬಂಧು ವರ್ಗದವರನ್ನುಅಗಲಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ : ಜಿಲ್ಲೆಗಳ 17 ಖಾಸಗಿ ಪ.ಪೂ. ಕಾಲೇಜುಗಳಲ್ಲಿ ಶೂನ್ಯ ದಾಖಲಾತಿ – Vishwanews24

Leave a Reply