ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಕೊರೋನ ಲಸಿಕೆ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜಾ ಚಾಲನೆ -Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಕೊರೋನ ಲಸಿಕೆ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜಾ ಚಾಲನೆ -Vishwanews24

ಬೆಳ್ತಂಗಡಿ,: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ತಾಲೂಕಿನಲ್ಲಿ ಕೊರೋನ ಲಸಿಕೆ ಅಭಿಯಾನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿಂದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಜಗತ್ತನ್ನು ಕೊರೋನದ ಅಂಧಕಾರದಿಂದ ಹೊರತರುವ ಲಸಿಕೆಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಇದು ಸಂತಸದ ವಿಚಾರ. ತಾಲೂಕಿನಲ್ಲಿ 1,700 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದರು.

ಆಶಾ ಕಾರ್ಯಕರ್ತೆಯರು ಹಾಗೂ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಇಂದು ಲಸಿಕೆ ನೀಡಲಾಗುತ್ತಿದೆ.ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಉಪಸ್ಥಿತರಿದ್ದು, ಶುಭ ಹಾರೈಸಿದರು.

ತಾಪಂ ಉಪಾಧ್ಯಕ್ಷೆ ವೇದಾವತಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ತಾಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್,

ತಾಲೂಕು ಆಡಳಿತ ವೈಧ್ಯಾಧಿಕಾರಿ ಡಾ.ಕಲಾಮಧು, ನೋಡೆಲ್ ವೈದ್ಯಾಧಿಕಾರಿ ಡಾ.ರತ್ನಾಕರ್ ಹಾಗೂ ಇತರರು ಉಪಸ್ಥಿತರಿದ್ದರು. ಅಜಯ್ ಕಾರ್ಯಕ್ರಮ ನಿರೂಪಿಸಿದರು.

http://ದೇಶದಲ್ಲಿ ಎಲ್ಲೆಡೆ ಒಂದೇ ಕಾಲದಲ್ಲಿ ಕೊರೋನಾ ಲಸಿಕೆ ಬಿಡುಗಡೆ : ಇಂದು ಐತಿಹಾಸಿಕ ಲಸಿಕಾ ಆಂದೋಲನದ ದಿನವಾಗಿದೆ : ಡಾ.ಕೆ.ಸುಧಾಕರ್‌ -Vishwanews24