ಬೆಳ್ತಂಗಡಿ : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿಸೆಂಬರ್ 20ರಂದು ಸಂಜೆ ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್ ಸಮೀಪ ನಡೆದಿದೆ.
ಬಂಟ್ವಾಳ ತಾಲೂಕಿನ ನಾವೂರು ಮಲೆಬಾವು ನಿವಾಸಿ ವಿಜಯ್ (25) ಮೃತ ಯುವಕ. ಸಹ ಸವಾರ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬಾಂಬಿಲ ನಿವಾಸಿ ಶೈಲೇಶ್ (25 ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಜಯ್ ಉಜಿರೆ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಸಂಜೆ ಕೆಲಸ ಮುಗಿಸಿ ಬೈಕ್ನಲ್ಲಿ ಬಂಟ್ವಾಳದಲ್ಲಿರುವ ಮನೆ ಕಡೆ ಇಬ್ಬರೂ ತೆರಳುತ್ತಿದ್ದರು. ಈ ವೇಳೆ ಸಾರಿಗೆ ಬಸ್ ಬೈಕ್ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ಕಾರಣವಾದ ಬಸ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವಿಜಯ್ ತಂದೆ ಈ ಹಿಂದೆಯೇ ನಿಧನರಾಗಿದ್ದು, ತಾಯಿ ಮತ್ತು ತಂಗಿಯೊಂದಿಗೆ ಬಂಟ್ವಾಳದಲ್ಲಿ ವಾಸವಾಗಿದ್ದರು. ಮನೆಗೆ ಆಧಾರ ಸ್ಥಂಭವಾಗಿದ್ದ ವಿಜಯ್ನನ್ನು ಕಳೆದುಕೊಂಡ ಕುಟುಂಬ ಇದೀಗ ಅಕ್ಷರಶಃ ಸಂಕಷ್ಟದಲ್ಲಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…