ಬೆಳ್ತಂಗಡಿ : ವಾಹನವೊಂದಕ್ಕೆ ಬ್ಯಾಂಕ್ ಆಫ್ ಬರೋಡದಿಂದ ತೆಗೆದ ಲಕ್ಷಾಂತರ ರೂ ಸಾಲವನ್ನು ಕಟ್ಟದೆ ವಂಚಿಸಿದ ಘಟನೆ ನಡೆದಿದೆ. ಬ್ಯಾಂಕ್ ಮುಖ್ಯಸ್ಥರ ಪೋರ್ಜರಿ ಸಹಿಯನ್ನು ಲೆಟರ್ ಹೆಸ್ ನಲ್ಲಿ ಬಳಸಿ ಸಾಲ ಸಂಪೂರ್ಣ ಸಂದಾಯವಾಗಿರುವುದಾಗಿ ಸುಳ್ಳು ಪತ್ರವನ್ನು ಆರ್.ಟಿ.ಒ.ಕಚೇರಿಗೆ ನೀಡಿರುವುದರ ಕುರಿತು ದೂರು ದಾಖಲಾಗಿದೆ.
ಮೂಲತಃ ಬೆಳ್ತಂಗಡಿ ನಿವಾಸಿಗಳಾದ ತನ್ವಿರ್ ಹಾಗೂ ಅವರ ತಾಯಿ ನೆಬಿಶಾ ಮತ್ತು ಜುನೈದ್ ಮೆಲ್ಕಾರ್ ಹಾಗೂ ರಮೀಝ್ ಆಲಿಶ್ ಉಪ್ಪಿನಂಗಡಿ ಅವರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ವೀರ್ ಅವರು ಅಶೋಕ್ ಲೈಲಾಂಡ್ ಕಂಪೆನಿಯ ಲಾರಿ ಪಡೆದುಕೊಳ್ಳಲು 2023 ಮಾ.16 ರಂದು ಬ್ಯಾಂಕ್ ಆಫ್ ಬರೋಡದ ಉಪ್ಪಿನಂಗಡಿ ಶಾಖೆಯಿಂದ ತಾಯಿ ನೆಬಿಶಾ ರವರು ನೀಡಿದ ಜಾಮೀನು ಮೇಲೆ 45 ಲಕ್ಷ ರೂ ಸಾಲವನ್ನು ಪಡೆದಿದ್ದರು. ಈ ವಾಹನವನ್ನು ಆರೋಪಿ ತನ್ವೀರ್ ಅವರು 2024 ರ ಆ.22 ರಂದು ಜುನೈದ್ ಮೆಲ್ಕಾರ್ ರವರಿಗೆ ಜಿಪಿಎ ( ಜನರಲ್ ಫವರ್ ಅಫ್ ಎಟರ್ನಿ) ಯ ಮೂಲಕ ವಾಹನದ ಜವಬ್ದಾರಿ ನೀಡಿದ್ದಾರೆ.
ಇದರ ಬಳಿಕ 2024 ರ ಡಿ.16 ರಂದು ತನ್ವೀರ್ ಅವರು ಬ್ಯಾಂಕಿನ ಅಧಿಕಾರಿಯ ಪೋರ್ಜರಿ ಸಹಿಯನ್ನು ಬ್ಯಾಂಕಿನ ಲೆಟರ್ ಹೆಡ್ ನ ಅಡಿಯಲ್ಲಿ ತಯಾರಿಸಿ ಅದರಲ್ಲಿ ಬ್ಯಾಂಕ್ ಆಫ್ ಬರೋಡ ಉಪ್ಪಿನಂಗಡಿ ಶಾಖೆಯಲ್ಲಿರುವ ವಾಹನದ ಸಾಲ ಸಂಪೂರ್ಣ ಸಂದಾಯವಾಗಿರುತ್ತದೆ ಮತ್ತು ಪತ್ರದ ಆಧಾರದಲ್ಲಿ ಆರ್.ಟಿ.ಒ.ಬಂಟ್ವಾಳ ಕಚೇರಿಯಲ್ಲಿ ಋಣಭಾರವನ್ನು ತೆಗೆದು ಹಾಕಬಹುದು ಎಂದು ದೃಡಪತ್ರವನ್ನು ಬ್ಯಾಂಕ್ ಗೆ ವಂಚಿಸಿ, ಅರ್.ಟಿ.ಒ ಬಂಟ್ವಾಳಕ್ಕೆ ನೀಡಿದ್ದಾರೆ.
ಆರ್.ಟಿ.ಒ.ಬಂಟ್ವಾಳ ಕಚೇರಿಯಿಂದ ಸಿಕ್ಕಿದ ನಿರಪೇಕ್ಷಣಾ ಪತ್ರ ಪಡೆದ ಆಧಾರದಂತೆ ರಮೀಝ್ ಆಲಿಶ್ ಅವರು ಪೂರ್ವನಿರ್ಧರಿತ ಷಡ್ಯಂತ್ರವನ್ನು ಮಾಡಿ ಇವರ ಹೆಸರಿಗೆ ಲಾರಿಯನ್ನು ವರ್ಗಾವಣೆಯನ್ನು ಮಾಡಿಕೊಂಡಿರುತ್ತಾರೆ. ಈ ಎಲ್ಲಾ ವಂಚನೆಯನ್ನು ನಾಲ್ಕು ಮಂದಿ ಸೇರಿ ಮಾಡಿರುವ ಕಾರಣಕ್ಕಾಗಿ ನಾಲ್ವರ ವಿರುದ್ಧ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ವಂಚನೆ ಪ್ರಕರಣ ದಾಖಲಿಸಲಾಗಿದೆ. ಪೋಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…