Featured

ಬೆಳ್ತಂಗಡಿ : ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಆಯ್ಕೆ -Vishwanews24

ಬೆಳ್ತಂಗಡಿ : ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಆಯ್ಕೆ -Vishwanews24

ಬೆಳ್ತಂಗಡಿ: ಕರ್ನಾಟಕ ಉಚ್ಚ ನ್ಯಾಯಾಲಯದ ‌2020ನೇ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2021 ಫೆ.25ರಂದು ಹೊರಡಿಸಲಾದ ಅಧಿಸೂಚನೆಯಂತೆ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ‌ (29) ಆಯ್ಕೆಯಾಗಿದ್ದಾರೆ.

ಧರ್ಮಸ್ಥಳದ ನಾರ್ಯ ಎಂಬ ಪುಟ್ಟ ಕುಟುಂಬದಲ್ಲಿ ಜನಿಸಿದ ಚೇತನಾ ಅವರು ಅಸಮಾನ್ಯ ಸಾಧನೆ ಮಾಡಿದ್ದಾರೆ. ಇವರ ತಂದೆ ರಾಮಣ್ಣ ಪೂಜಾರಿ ಮತ್ತು ತಾಯಿ ಸೀತಾ ದಂಪತಿಯ ನಾಲ್ಕು ಮಕ್ಕಳಲ್ಲಿ ಚೇತನಾ ಎರಡನೆಯವರು.

ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24

1ರಿಂದ 6ನೇ ತರಗತಿವರೆಗಿನ ಪ್ರಾಥಮಿಕ ಶಿಕ್ಷಣವನ್ನು ಉಪ್ಪಿನಂಗಡಿ ಸಮೀಪದ ಪೆರ್ನೆ ಕನ್ನಡ ಮಾಧ್ಯಮ ಶಾಲೆ, ಕನ್ಯಾಡಿ ಸರಕಾರಿ ಶಾಲೆಯಲ್ಲಿ ಏಳನೇ ತರಗತಿ ಪೂರ್ಣಗೊಳಿಸಿ ಧರ್ಮಸ್ಥಳ ಶ್ರೀ. ಧ.ಮಂ. ಸೆಕೆಂಡರಿ ಶಾಲೆಯಲ್ಲಿ ಪ್ರೌಢ ಶಿಕ್ಷಣ, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ.ಪೂ.ಶಿಕ್ಷಣ ಪೂರ್ಣಗೊಳಿಸಿದ್ದಾರೆ.

ಉಡುಪಿ: ಜನಧ್ವನಿ ಪಾದಯಾತ್ರೆ ಫೆ. 27ರ ಸಮಾಪನ ಸಭೆಗೆ ಡಿ. ಕೆ. ಶಿ ಬೈಂದೂರಿಗೆ -Vishwanews24

ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ 2016ರಲ್ಲಿ ತಮ್ಮ ಕಾನೂನು ವಿದ್ಯಾಭ್ಯಾಸ ಪೂರ್ಣಗೊಳಿಸಿ ಬೆಳ್ತಂಗಡಿಯ ವಕೀಲರಾದ ಕೇಶವ ಪಿ. ಬೆಳಾಲು ಅವರ‌ಲ್ಲಿ ವಕೀಲ ವೃತ್ತಿ ಅರಂಭಿಸಿದ್ದಾರೆ. ಬಳಿಕ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಬಿ. ಎ. ಪಾಟೀಲ್ ಅವರ ಕ್ಲರ್ಕ್ ರಿಸರ್ಚ್ ಅಸಿಸ್ಟೆಂಟ್ ಆಗಿ ಸುಮಾರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ, ಒಂದು ವರ್ಷದಿಂದ ನ್ಯಾಯವಾದಿ ಶಿವಪ್ರಸಾದ್ ಶಾಂತನಗೌಡರ್ ಕಚೇರಿಯಲ್ಲಿ ಕಿರಿಯ ವಕೀಲರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವೃತ್ತಿ ಜೀವನ‌ ನಡೆಸುತ್ತಿದ್ದರು.

ಇದೀಗ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ‌ ಸಿವಿಲ್‌ ನ್ಯಾಯಾಧೀಶ ಹುದ್ದೆಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಜನಿಸಿ ಯುವತಿಯೋರ್ವಳು ಕಿರಿಯ ವಯಸ್ಸಿನಲ್ಲೇ ಅಸಾಮಾನ್ಯ ಸಾಧನೆ‌ ತೋರಿದ್ದಾರೆ.

ಮಾರ್ಚ್,1ರಂದು ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ತ್ರಿಕಾಲ ಪೂಜೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

4 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

5 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

5 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

5 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

5 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

6 hours ago