ಬೆಳ್ತಂಗಡಿ : ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕುಸುಮವತಿ ದಂಪತಿಯ ಎರಡನೇ ಮಗಳು ಸೌಜನ್ಯ (17) ಕಾಲೇಜು ಮುಗಿಸಿ ಮನೆಗೆ ವಾಪಸ್ ಹೋಗುವಾಗ 9-10-2012 ರಂದು ಸಂಜೆ 4:15 ಕ್ಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
10-10-2012 ರಂದು ರಾತ್ರಿ 10:30 ಕ್ಕೆ ಧರ್ಮಸ್ಥಳ ಮಣ್ಣಸಂಖದಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರೇಪ್ & ಮರ್ಡರ್ ಪ್ರಕರಣ ದಾಖಲಾಗಿತ್ತು.
11-10-2012 ರಂದು ಪ್ರಕರಣದ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹೌಸಿಂಗ್ ಕಾಲೋನಿಯ ಸಂತೋಷ್ ರಾವ್ (38) ಬಾಹುಬಲಿ ಬೆಟ್ಟದ ಗುಡ್ಡದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು. ಪ್ರಕರಣವನ್ನು ಸಿಐಡಿಗೆ ನೀಡಲಾಗಿತ್ತು. ಬಳಿಕ ಪ್ರತಿಭಟನೆ ಜೋರಾಗಿದ್ದರಿಂದ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಗೆ ನೀಡಿತ್ತು.
ಪ್ರಕರಣದ ಆರೋಪಿ ಸಂತೋಷ್ ರಾವ್ ಬೆಂಗಳೂರು ಸಿಬಿಐ ಕೋರ್ಟ್ ಗೆ ಆರು ಬಾರಿಗೂ ಹೆಚ್ಚು ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ನಡೆದು 11 ವರ್ಷಗಳ ಬಳಿಕ ದಿ.16-06-2023 ರಂದು ಪ್ರಕರಣ ತೀರ್ಪು ಪ್ರಕಟವಾಗಲಿದೆ. ಇಡೀ ರಾಜ್ಯದ ಜನರೇ ಈ ಪ್ರಕರಣದ ತೀರ್ಪಿಗಾಗಿ ಕಾಯುತ್ತಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…