Featured

ಬೆಳ್ತಂಗಡಿ : ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು : ವಸಂತ ಬಂಗೇರ ಸ್ಫೋಟಕ ಹೇಳಿಕೆ – Vishwanews24

ಬೆಳ್ತಂಗಡಿ : ನನ್ನ ಅಂತ್ಯದೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ : ವಸಂತ ಬಂಗೇರ

ಬೆಳ್ತಂಗಡಿ : ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು ಎಂದು ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದೀಗ ಇವರ ಹೇಳಿಕೆ ಜಿಲ್ಲೆಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದ್ದು, ಸೌಜನ್ಯ ಪ್ರಕರಣ ಮತ್ತೊಂದು ದೊಡ್ಡ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯ ಇದೀಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಹೇಳಿಕೆಗಳು ಇದೀಗ ಪ್ರಮುಖ ರಾಜಕೀಯ ಮುಖಂಡರ ಬಾಯಿಯಿಂದ ಬರಲಾರಂಭಿಸಿದೆಯ ಈ ನಡುವೆ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನ ದಾರಿ ತಪ್ಪಿಸಲಾಗಿದೆ ಎಂಬ ಮಾತನ್ನು ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದು ಪ್ರಕರಣದ ತನಿಖೆ ಬಗ್ಗೆ ಅನುಮಾನ ಮೂಡಿಸಿದೆ.

ಬೆಳ್ತಂಗಡಿಯಲ್ಲಿ ಮಾತಾಡಿದ ಅವರು ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ, ಸಿದ್ದರಾಮಯ್ಯನವರೂ ಕೆಲವರನ್ನ ತುಂಬಾ ಒಳ್ಳೆಯವರು ಎಂದು ನಂಬಿದ್ದರು. ನನ್ನನ್ನ ಕರೆದು ಹೇಳಿದ್ರು ಇದನ್ನ ಪ್ರಸ್ತಾಪ ಮಾಡಬೇಡ …ಈ ಕೇಸನ್ನ ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದರು. ‘ನಾನು ಸುಮಾರು ಒಂದೂ ಗಂಟೆಗೂ ಅಧಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೆ. ಕೇವಲ ಸೌಜನ್ಯ ಪ್ರಕರಣ ಮಾತ್ರವಲ್ಲ ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ತಿಳಿಸಿದ್ದೆ. ‘ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯ ಪ್ರಕರಣವನ್ನ ಸಿಬಿಐಗೆ ವಹಿಸಿದೆ ಎಂದರು. ಆದರೆ ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ನನಗಿತ್ತು, ‘ಆದರೆ ಸಿಬಿಐ ತನಿಖೆಯ ಅರ್ಧದಲ್ಲಿ ಇದರಲ್ಲಿ ಮೋಸ ಇದೆ ಎನ್ನೋದು ನನಗೆ ತಿಳಿಯಿತು. ಅದನ್ನ ಸಾರ್ವಜನಿಕವಾಗಿ ನಿಮ್ಮ ಮುಂದೆ ಹೇಳಲು ಸಾಧ್ಯವಿಲ್ಲ,ಆದರೆ ಸಂದರ್ಭ ಬಂದಾಗ ನಾನು ಪ್ರಸ್ತಾಪಿಸಿಯೇ ಸಿದ್ಧ, ಒಂದಲ್ಲ ಒಂದು ದಿನ  ಕಾಲ ಬರುತ್ತೆ,

ಆವತ್ತು ಸೌಜನ್ಯ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು, ಅನ್ಯಾಯ ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಆದರೆ ನನ್ನನ್ನು ಸಾಯಿಸಿದ್ರೂ ಸಾಯಿಸಬಹುದು. ಅಂತೂ ನನ್ನ ಅಂತ್ಯದೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ ಎಂದಿದ್ದಾರೆ.

ಸಿದ್ದರಾಮಯ್ಯನವರನ್ನ ಏಕಾಂಗಿಯಾಗಿ ಭೇಟಿಯಾಗಿ ಈ ಪ್ರಕರಣವನ್ನ ಹೇಗೆ ತನಿಖೆ ಮಾಡಬೇಕೆಂಬುದನ್ನ ಹೇಳುತ್ತೇನೆ. ಇದನ್ನ ಈ ರೀತಿ ತನಿಖೆ ಮಾಡಬೇಕು, ಇಂತವರನ್ನೇ ತನಿಖೆ ಮಾಡಬೇಕು ಎಂದು ಹೇಳುತ್ತೇನೆ. ಖಾಕಿಯವರನ್ನೂ ಕೈ ಕಾಲು ಕಟ್ಟಿ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯನವರಿಗೆ ತಿಳಿಸುತ್ತೇನೆ. ತಪ್ಪು ಮಾಡಿದವನೂ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅದನ್ನ ಅನುಭವಿಸಲೇ ಬೇಕು. ಒಗ್ಗಟ್ಟಾಗಿ ಸೌಜನ್ಯ ವಿರುದ್ಧವಾದ ದೌರ್ಜನ್ಯ ಹಾಗೂ ಕೊಲೆ ವಿರುದ್ದ ದೇಶವ್ಯಾಪಿಯಾಗಿ ಪ್ರತಿಭಟನೆಯಾಗುತ್ತೆ. ಸೌಜನ್ಯ ಕುಟುಂಬಸ್ಥರನ್ನ ಮುಖ್ಯಮಂತ್ರಿಗಳಿಗೆ ಖುದ್ದು ನಾನೇ ಭೇಟಿ ಮಾಡಿಸಿದ್ದೇನೆ. ಮುಖ್ಯಮಂತ್ರಿಗಳಿಗೂ ಸೌಜನ್ಯ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ ಎಂದರು. ಸದ್ಯ ವಸಂತ ಬಂಗೇರ ಹೇಳಿಕೆ ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago