Featured

ಬೆಳ್ತಂಗಡಿ : ಸ್ನಾನಕ್ಕೆ ಹೋದ ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು ನೀರುಪಾಲು – vishwanews24

ಬೆಳ್ತಂಗಡಿ : ಸ್ನಾನಕ್ಕೆ ಹೋದ ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು ನೀರುಪಾಲು

ಬೆಳ್ತಂಗಡಿ: ಡ್ಯಾಂ ಬಳಿ ಸ್ನಾನಕ್ಕೆ ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಕೋಡಿ ಎಂಬಲ್ಲಿ ನಡೆದಿದೆ.

ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್ (20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19) , ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಮೃತರು. ಇವರು ಇಂದು ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮಿತ್ತ ಬಂದಿದ್ದರು.

ಮಧ್ಯಾಹ್ನ ಊಟ ಮುಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಸ್ನಾನ ಮಾಡಲು ಮೂವರು ಹೋಗಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂವರ ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮೂವರು ಕೂಡ ಮಂಗಳೂರು ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

13 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

13 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

13 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

14 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

14 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

16 hours ago