ಬೆಳ್ತಂಗಡಿ: ಡ್ಯಾಂ ಬಳಿ ಸ್ನಾನಕ್ಕೆ ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಕೋಡಿ ಎಂಬಲ್ಲಿ ನಡೆದಿದೆ.
ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್ (20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19) , ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಮೃತರು. ಇವರು ಇಂದು ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮಿತ್ತ ಬಂದಿದ್ದರು.
ಮಧ್ಯಾಹ್ನ ಊಟ ಮುಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಸ್ನಾನ ಮಾಡಲು ಮೂವರು ಹೋಗಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂವರ ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮೂವರು ಕೂಡ ಮಂಗಳೂರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…