ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ನಿಧನ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ನಿಧನ

ಬೆಳ್ತಂಗಡಿ : ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ.

ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು.

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು ತಂದೆ-ತಾಯಿ, ಸಹೋದರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

ಉಚ್ಚಿಲ ದಸರಾ: ಇಂದು ವೈಭವದ  ಶೋಭಾಯಾತ್ರೆ ; ಕಾಪು ಬೀಚ್‌ನಲ್ಲಿ ಬೃಹತ್ ಗಂಗಾರತಿ, ವಿದ್ಯುದ್ದೀಪಾಲಂಕಾರ, ಸುಡುಮದ್ದು ಲೇಸರ್ ಲೈಟ್ ಪ್ರದರ್ಶನ  – vishwanews24

Leave a Reply